ಅಮರಾವತಿ: ಆಂಧ್ರದ ಗುಂಟೂರಿನ ಜಿನ್ನಾ ಟವರ್ ಸೆಂಟರ್ಗೆ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಹೆಸರನ್ನು ಮರುನಾಮಕರಣ ಮಾಡುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
ಮರುನಾಮಕರಣಕ್ಕೆ ಆಗ್ರಹಿಸಿ ಮಂಗಳವಾರ ಸಂಜೆ ಮೆರವಣಿಗೆ ನಡೆಸಲು ಯತ್ನಿಸಿದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸುನೀಲ್ ದಿಯೋಧರ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಪಕ್ಷದ ಯುವ ಘಟಕ BJYM ಸಭೆಯ ನಂತರ, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಜಿನ್ನಾ ಟವರ್ಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲು ಪ್ರಯತ್ನಿಸಿದರು ಆದರೆ ಪೊಲೀಸರು ಅವರನ್ನು ತಡೆದು ಬಂಧಿಸಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಮತ್ತು ಇತರ ಹಿಂದೂ ಸಂಘಟನೆಗಳು ಐತಿಹಾಸಿಕ ಜಿನ್ನಾ ಟವರ್ಗೆ ಮರುನಾಮಕರಣ ಮಾಡಬೇಕೆಂದು ಒತ್ತಾಯಿಸುತ್ತಿದ್ದರೂ ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲ.
ಬಿಜೆಪಿಯ ರಾಜ್ಯಸಭಾ ಸದಸ್ಯ ಜಿವಿಎಲ್ ನರಸಿಂಹ ರಾವ್ ಅವರು ತಮ್ಮ ಪಕ್ಷದ ನಾಯಕರ ವಿರುದ್ಧ ಪೋಲೀಸರ ದೌರ್ಜನ್ಯ ಮತ್ತು ಬಂಧನವನ್ನು ಖಂಡಿಸಿದ್ದಾರೆ.
ಟ್ವೀಟ್ನಲ್ಲಿ ಅವರು “ನಾವು ಆಂಧ್ರಪ್ರದೇಶದಲ್ಲಿದ್ದೇವೆಯೋ ಅಥವಾ ಪಾಕಿಸ್ತಾನದಲ್ಲಿದ್ದೇವೆಯೋ” ಎಂದು ಪ್ರಶ್ನೆ ಮಾಡಿದ್ದಾರೆ
ರಾಜ್ಯ ಬಿಜೆಪಿ ಅಧ್ಯಕ್ಷ ಸೋಮು ವೀರರಾಜು ಮಾತನಾಡಿ, ಟವರ್ಗೆ ಮರುನಾಮಕರಣ ಮಾಡಬೇಕೆಂದು ತಮ್ಮ ಪಕ್ಷ ಮಾತ್ರವಲ್ಲದೆ ಜನರು ಕೂಡ ಒತ್ತಾಯಿಸಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.