ನವದೆಹಲಿ: ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆದ ಕ್ವಾಡ್ ಶೃಂಗಸಭೆಯನ್ನು ಮುಗಿಸಿ ಇಂದು ಬೆಳಗ್ಗೆ ಭಾರತಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ತಕ್ಷಣವೇ ದೆಹಲಿಯಲ್ಲಿ ಸಂಪುಟ ಸಮಿತಿ ಸಭೆ ನಡೆಸಿದ್ದಾರೆ.
ಸಂಪುಟದ ಹಿರಿಯ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಎಸ್. ಜೈಶಂಕರ್, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್ ಅವರು ಸೇರಿದಂತೆ ಹಲವು ಸಚಿವರು ಸಂಪುಟ ಸಭೆಯಲ್ಲಿ ಭಾಗಿಯಾಗಿದ್ದಾರೆ.
ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಇಂದು ಪಾಲಂನ ವಾಯುಪಡೆ ನಿಲ್ದಾಣಕ್ಕೆ ಆಗಮಿಸಿದರು.
ಕ್ವಾಡ್ ಶೃಂಗಸಭೆಯಲ್ಲಿ, ಪಿಎಂ ಮೋದಿ ಅವರು ಯುದ್ಧವನ್ನು ನಿಲ್ಲಿಸುವುದು, ಸಂವಾದ ಮತ್ತು ರಾಜತಾಂತ್ರಿಕತೆಯ ಪುನರಾರಂಭದ ಅಗತ್ಯತೆಯ ಕುರಿತು ಭಾರತದ ಸ್ಥಿರ ಮತ್ತು ತಾತ್ವಿಕ ನಿಲುವನ್ನು ಎತ್ತಿ ತೋರಿಸಿದರು.
Immediately after his return from a 41 hours long Japan visit in different time zone which witnessed 24 meetings, Prime Minister Narendra Modi holds cabinet meeting early morning today pic.twitter.com/9WsGimZ1H0
— DeshGujarat (@DeshGujarat) May 25, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.