ಬೆಂಗಳೂರು: ರಾಜ್ಯದ 75 ಸ್ಥಳಗಳಲ್ಲಿ ಮೇ 28 ರಂದು ʼಅಮೃತ ಭಾರತಿಗೆ ಕನ್ನಡದಾರತಿʼ ಅಭಿಯಾನಕ್ಕೆ ಚಾಲನೆ ದೊರೆಯಲಿದೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ವಾತಂತ್ರ್ಯದ ಹೋರಾಟ ನಡೆದ ಪ್ರಮುಖ 75 ಸ್ಥಳಗಳಲ್ಲಿ ಸ್ವಾತಂತ್ರ್ಯದ ಹೋರಾಟದ ಸ್ಮರಣೆ ನಡೆಯಲಿದೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ನಡೆಯಲಿದೆ.
ಜುಲೈ 1 ರಿಂದ 15 ರ ವರೆಗೆ ʼಹೋರಾಟದ ನೆಲದಲ್ಲಿ ಒಂದು ದಿನʼ ಕಾರ್ಯಕ್ರಮ, ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ.
ಆಗಸ್ಟ್ 1 ರಿಂದ 8 ರ ವರೆಗೆ ರಥಯಾತ್ರೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಆಗಸ್ಟ್ 9 ರಂದು ಮನೆ-ಮನೆಯಲ್ಲಿ ರಾಷ್ಟ್ರಧ್ವಜ ಕಾರ್ಯಕ್ರಮ ನಡೆಯಲಿದೆ.
ನಿನ್ನೆ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಿಂದ ಇಲಾಖೆಯಿಂದ ಹೊರತಂದಿರುವ ಭಿತ್ತಿಪತ್ರ, ಕಿರುಚಿತ್ರ, ಲಾಂಛನ ಮತ್ತು ಅಭಿಯಾನದ ಗೀತೆಗಳನ್ನು ಪತ್ರಿಕಾಗೋಷ್ಠಿಯಲ್ಲಿ ಲೋಕಾರ್ಪಣೆಗೊಳಿಸಲಾಯಿತು.
ಮೇ 28, 2022 ರಂದು ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುವ ಜಿಲ್ಲೆ ಹಾಗೂ ಸ್ಥಳಗಳು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.