ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾನೂನಿನಡಿಯಲ್ಲಿ ಚಾರ್ಜ್ಶೀಟ್ ಸಲ್ಲಿಸಿದೆ. ಈ ಹಿಂದೆ ಡಿಕೆಶಿ ಪ್ರಕರಣದಲ್ಲಿ ಬಂಧಿತರಾಗಿದ್ದರು.
800 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿ ಮತ್ತು 300ಕ್ಕೂ ಅಧಿಕ ಬ್ಯಾಂಕ್ ಖಾತೆಯನ್ನು ಹೊಂದಿದ ಆರೋಪ ಡಿಕೆಶಿ ಅವರ ಮೇಲಿದೆ. ಪುತ್ರಿಯ ಹೆಸರಲ್ಲಿ108 ಕೋಟಿ ರೂಪಾಯಿ ಅಕ್ರಮ ವ್ಯವಹಾರ ಮಾಡಿರುವ ಮತ್ತು ಆಕೆಗೆ ಸಾಲ ಇದೆ ಎಂದು ಸುಳ್ಳು ದಾಖಲೆ ತೋರಿಸಿರುವ ಆರೋಪ ಇವರ ಮೇಲೆ ಇದೆ.
ನೋಟ್ ಬ್ಯಾನ್ ಬಳಿಕ ಇವರ ದೆಹಲಿಯ ನಿವಾಸದಲ್ಲಿ 8 ಕೋಟಿಗೂ ಅಧಿಕ ಮೊತ್ತದ ಹಣ ಪತ್ತೆಯಾಗಿತ್ತು, ಈ ಹಣಕ್ಕೆ ಅವರು ಲೆಕ್ಕ ಕೊಟ್ಟಿಲ್ಲ ಎನ್ನಲಾಗಿದೆ.
2019ರಲ್ಲಿ ಇವರು ಬಂಧನಕ್ಕೆ ಒಳಗಾಗಿ ಸುಮಾರು 45 ದಿನಗಳ ಕಾಲ ತಿಹಾರ್ ಜೈಲಿನಲ್ಲಿ ಇದ್ದರು. ಇವರಿಗೆ ಬಳಿಕ ದೆಹಲಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು.
ದೆಹಲಿ ನ್ಯಾಯಾಲಯದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ)ಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಾಸಿಕ್ಯೂಷನ್ ದೂರನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಡಿ ಸೆಪ್ಟೆಂಬರ್ 2018 ರಲ್ಲಿ ಶಿವಕುಮಾರ್, ನವದೆಹಲಿಯ ಕರ್ನಾಟಕ ಭವನದ ಉದ್ಯೋಗಿ ಎ ಹನುಮಂತಯ್ಯ ಮತ್ತು ಇತರ ಜನರ ವಿರುದ್ಧ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.