ನವದೆಹಲಿ: ದೆಹಲಿಯ ತ್ಯಾಗರಾಜ್ ಸ್ಟೇಡಿಯಂನಲ್ಲಿ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಂಡ ಆರೋಪ ಹೊತ್ತಿರುವ ಎಜಿಎಂಯುಟಿ ಕೇಡರ್ ಐಎಎಸ್ ಅಧಿಕಾರಿಗಳಾದ ಸಂಜೀವ್ ಖಿರ್ವಾರ್ ಮತ್ತು ರಿಂಕು ದುಗ್ಗಾ ಅವರನ್ನು ದೆಹಲಿಯಿಂದ ಲಡಾಖ್ ಮತ್ತು ಅರುಣಾಚಲ ಪ್ರದೇಶಕ್ಕೆ ಗೃಹ ಸಚಿವಾಲಯವು ವರ್ಗಾಯಿಸಿದೆ.
AGMUT ಕೇಡರ್ನ 1994-ಬ್ಯಾಚ್ ಐಎಎಸ್ ಅಧಿಕಾರಿ ಖಿರ್ವಾರ್ ಅವರನ್ನು ಲಡಾಖ್ಗೆ ಮತ್ತು ಅವರ ಪತ್ನಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅರುಣಾಚಲ ಪ್ರದೇಶಕ್ಕೆ ವರ್ಗಾಯಿಸಲಾಗಿದೆ ಎಂದು ಗೃಹ ಸಚಿವಾಲಯ ಆದೇಶದಲ್ಲಿ ತಿಳಿಸಿದೆ.
ವರದಿಗಳ ಪ್ರಕಾರ ಸಂಜೀವ್ ಖಿರ್ವಾರ್ ಮತ್ತು ಅವರ ಪತ್ನಿ ಸ್ಟೇಡಿಯಂನಲ್ಲಿ ತಮ್ಮ ಸಾಕು ನಾಯಿಯನ್ನು ಕರೆದುಕೊಂಡು ಬಂದು ವಾಕ್ ಮಾಡುತ್ತಿದ್ದರು. ಹೀಗಾಗಿ ಅಲ್ಲಿ ತರಬೇತಿ ಪಡೆಯುತ್ತಿದ್ದ ಕ್ರೀಡಾಪಟುಗಳು ಬೇಗನೆ ತಮ್ಮ ತರಬೇತಿಯನ್ನು ಮುಗಿಸಿ ಹೊರ ನಡೆಯಬೇಕಾಗಿತ್ತು.
“ನಾವು ಮೊದಲು ರಾತ್ರಿ 8-8.30 ರವರೆಗೆ ತರಬೇತಿ ನೀಡುತ್ತಿದ್ದೆವು. ಆದರೆ ಈಗ, ಅಧಿಕಾರಿಯು ತನ್ನ ನಾಯಿಯನ್ನು ಸಂಜೆ 7 ಗಂಟೆಗೆ ಸ್ಟೇಡಿಯಂಗೆ ಕರೆದುಕೊಂಡು ಬಂದು ವಾಕ್ ಮಾಡುತ್ತಿದ್ದಾರೆ ಮತ್ತು ಕ್ರೀಡಾಳುಗಳನ್ನು ಹೊರಹೋಗುವಂತೆ ಹೇಳುತ್ತಿದ್ದಾರೆ. ನಮ್ಮ ತರಬೇತಿ ಮತ್ತು ಅಭ್ಯಾಸದ ದಿನಚರಿ ಅಸ್ತವ್ಯಸ್ತಗೊಂಡಿದೆ” ಎಂದು ತರಬೇತುದಾರರೊಬ್ಬರು ಪತ್ರಿಕೆಗೆ ತಿಳಿಸಿದ್ದರು.
ಈ ವರದಿಯನ್ನು ಅನುಸರಿಸಿ ಗೃಹ ಸಚಿವಾಲಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡಿದೆ.
2010 ರ ಕಾಮನ್ವೆಲ್ತ್ ಕ್ರೀಡಾಕೂಟಕ್ಕಾಗಿ ನಿರ್ಮಿಸಲಾದ ಈ ಕೇಂದ್ರೀಯ ಕ್ರೀಡಾ ಸಂಕೀರ್ಣವು ಬಹು-ವ್ಯವಸ್ಥೆಯ ಸೌಲಭ್ಯವಾಗಿದ್ದು, ರಾಷ್ಟ್ರೀಯ ಮತ್ತು ರಾಜ್ಯ ಕ್ರೀಡಾಪಟುಗಳು ಮತ್ತು ಫುಟ್ಬಾಲ್ ಆಟಗಾರರನ್ನು ಆಕರ್ಷಿಸುತ್ತದೆ.
Hours after a news report regarding the misuse of facilities at Thyagraj Stadium by Sanjeev Khirwar & his wife Rinku Dugga, MHA has transferred both the AGMUT cadre IAS officers Sanjeev Khirwar & Rinku Dugga to Ladakh and Arunachal Pradesh from Delhi respectively: MHA order pic.twitter.com/teMHyNPwhw
— ANI (@ANI) May 26, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.