ಕಾರವಾರ: ಎರಡು ದಿನಗಳ ಭೇಟಿಗಾಗಿ ಕಾರವಾರ ನೌಕಾನೆಲೆಗೆ ಗುರುವಾರ ಆಗಮಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಐಎನ್ಎಸ್ ಖಂಡೇರಿ ಸಬ್ ಮೆರಿನ್ ಮೂಲಕ ಸಮುದ್ರಯಾನ ನಡೆಸಿದರು.
ಕದಂಬ ನೌಕಾನೆಲೆಯಲ್ಲಿ ವಾಸ್ತವ್ಯ ಹೂಡಿದ್ದ ಅವರು ಬೆಳಗ್ಗೆ ಯೋಗಾಭ್ಯಾಸದ ಬಳಿಕ ಭಾರತೀಯ ತಂತ್ರಜ್ಞಾನದಿಂದ ನಿರ್ಮಾಣವಾದ ಐಎನ್ಎಸ್ ಖಂಡೇರಿ ಜಲಾಂತರ್ಗಾಮಿ ಮೂಲಕ ಸಮುದ್ರಯಾನ ಕೈಗೊಂಡರು. ಈ ಸಂದರ್ಭದಲ್ಲಿ ಅವರಿಗೆ ನೀರೊಳಗಿನ ಡೊಮೇನ್ ನಡೆಸಿ ವಿವಿಧ ಕಾರ್ಯಾಚರಣೆಗಳ ಬಗ್ಗೆ ಮಾಹಿತಿ ನೀಡಲಾಯಿತು.
ಮೇಕ್ ಇನ್ ಇಂಡಿಯಾ ಉಪಕ್ರಮದ ಅಡಿಯಲ್ಲಿ ಮುಂಬೈನ ಮಜಗಾವ್ ಡಾಕ್ಸ್ನಲ್ಲಿ ನಿರ್ಮಿಸಲಾದ ಸಬ್ ಮೆರಿನ್ ಪ್ರಾಜೆಕ್ಟ್ 75 ಜಲಾಂತರ್ಗಾಮಿ ನೌಕೆಗಳ ಖಂಡೇರಿ ಎರಡನೇಯದಾಗಿದೆ.
ನಿನ್ನೆ ನೌಕಾನೆಲೆಯಲ್ಲಿ ಮಾತನಾಡಿದ ಸಿಂಗ್, ಇತ್ತೀಚಿನ ವರ್ಷಗಳಲ್ಲಿ ಜಗತ್ತು ಭಾರತವನ್ನು ಗಂಭೀರವಾಗಿ ಪರಿಗಣಿಸಲು ಪ್ರಾರಂಭಿಸಿದೆ. ಇದರ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಮತ್ತು ಪ್ರತಿಯೊಬ್ಬರೂ ಭಾರತದೊಂದಿಗೆ ಸಂಬಂಧ ಹೊಂದಲು ಬಯಸುತ್ತಿದ್ದಾರೆ ಎಂದು ಹೇಳಿದರು.
Had a wonderful and thrilling experience during my sea sortie of ‘INS Khanderi’ today. Spent hours under the sea and witnessed the combat capabilities and offensive strength of the state-of-the-art Kalvari class submarine. pic.twitter.com/fSLyarkWYD
— Rajnath Singh (@rajnathsingh) May 27, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.