ಬೆಂಗಳೂರು: ಸ್ವಿಟ್ಜರ್ಲೆಂಡ್ನ ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಕರ್ನಾಟಕ ಸುಮಾರು 65,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದಾವೋಸ್ನಿಂದ ಹಿಂದಿರುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಮತ್ತು ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲೂ ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ ಎಂದುಹೇಳಿದ್ದಾರೆ.
“ದಾವೋಸ್ ಸಭೆಯಲ್ಲಿ ಸುಮಾರು 25 ಕಂಪನಿಗಳೊಂದಿಗೆ ನಮ್ಮ ಚರ್ಚೆಯ ನಂತರ ರಾಜ್ಯಕ್ಕೆ 60,000 ಕೋಟಿಯಿಂದ 65,000 ಕೋಟಿ ರೂಪಾಯಿ ಮೌಲ್ಯದ ಹೂಡಿಕೆ ಹರಿದು ಬರುತ್ತದೆ ನಿರೀಕ್ಷಿಸಲಾಗಿದೆ” ಎಂದಿದ್ದಾರೆ.
“ಕೋವಿಡ್ ಬಳಿಕ ಉಂಟಾದ ಆರ್ಥಿಕ ಹಿಂಜರಿತ, ಪರಿಸರದಲ್ಲಿನ ಬದಲಾವಣೆ ಬಗ್ಗೆ ವಿಶ್ವ ಆರ್ಥಿಕ ವೇದಿಕೆಯಲ್ಲಿ ಚರ್ಚೆ ನಡೆಸಲಾಗಿದೆ. ಇಲ್ಲಿ ಭಾರತದಲ್ಲಿ ಹೂಡಿಕೆ ಮಾಡಲು ಉದ್ಯಮಿಗಳು ಆಸಕ್ತಿ ವಹಿಸಿದ್ದರು. ನವೀಕರಿಸಬಹುದಾದ ಇಂಧನಗಳ ಮೇಲೆ ಉದ್ಯಮಿಗಳಿಗೆ ಹೂಡಿಕೆ ಮಾಡಲು ಹೆಚ್ಚು ಆಸಕ್ತಿ ಇದೆ. ನಮ್ಮ ರಾಜ್ಯ ಹೆಚ್ಚಿನ ಹೂಡಿಕೆ ಆಕರ್ಷಿಸಿದೆ. ರಾಜ್ಯದ ಎಲ್ಲಾ ವಲಯಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ” ಎಂದು ಸಿಎಂ ಹೇಳಿದ್ದಾರೆ.
“ಜ್ಯುಬಿಲೆಂಟ್ ಇಂಡಿಯಾ ಗ್ರೂಪ್ ಕರ್ನಾಟಕದಲ್ಲಿ 700 ಕೋಟಿ ಬಂಡವಾಳ ಹೂಡಿಕೆಗೆ ನಿರ್ಧರಿಸಿದೆ. ಜ್ಯೂಬಿಲಿಯಂಟ್ ಫುಡ್ ವರ್ಕ್ಸ್ ನೂತನ ಕೇಂದ್ರೀಕೃತ ಪಾಕಶಾಲೆ ಪ್ರಾರಂಭಿಸಲು ಹಾಗೂ ಜ್ಯೂಬಿಲಿಯಂಟ್ ಬಯೋಸಿಸ್ ರಾಜ್ಯದ ದೇವನಹಳ್ಳಿಯಲ್ಲಿ 10 ಎಕರೆ ಪ್ರದೇಶದಲ್ಲಿ ನೂತನವಾಗಿ ಆರ್ & ಡಿ ಸೆಂಟರ್ ಸ್ಥಾಪಿಸಲು ತೀರ್ಮಾನಿಸಿದೆ. ಪ್ರಸ್ತುತ ರಾಜ್ಯದಲ್ಲಿ 9,000 ಜನರು ಈ ಸಂಸ್ಥೆಯಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.