ಚಂಪಾವತ್: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವುದಾಗಿ ಉತ್ತರಾಖಂಡ ಸರ್ಕಾರ ಶುಕ್ರವಾರ ಪ್ರಕಟಿಸಿದೆ.
“ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲು ನಾವು ನಿರ್ಧಾರ ಕೈಗೊಂಡಿದ್ದೇವೆ. ಗೋವಾ ನಂತರ ಇದನ್ನು ಜಾರಿಗೊಳಿಸಿದ ಎರಡನೇ ರಾಜ್ಯವಾಗಿ ಉತ್ತರಾಖಂಡ್ ಹೊರಹೊಮ್ಮಲಿದೆ” ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
“ಯಾವುದೇ ಧರ್ಮ ಮತ್ತು ಸಮಾಜದ ವರ್ಗವನ್ನು ಲೆಕ್ಕಿಸದೆ ನಾವು ಜನರಿಗಾಗಿ ಏಕರೂಪ ನಾಗರಿಕ ಸಂಹಿತೆ ತರುತ್ತೇವೆ” ಎಂದು ಚಂಪಾವತ್ನಲ್ಲಿ ಮಾಡಿದ ಭಾಷಣದಲ್ಲಿ ಧಾಮಿ ಭರವಸೆ ನೀಡಿದ್ದಾರೆ.
ಈ ಹಿಂದೆ ಮೇ 2 ರಂದು ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ಕೂಡ ಏಕರೂಪ ನಾಗರಿಕ ಸಂಹಿತೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದರು.
ಏಕರೂಪ ನಾಗರಿಕ ಸಂಹಿತೆ ಕುರಿತು ದೇಶದ ಹಲವಾರು ರಾಜ್ಯಗಳಲ್ಲಿ ಚರ್ಚೆ ಹುಟ್ಟಿಕೊಂಡಿದೆ, ಇತ್ತೀಚೆಗೆ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಂ ಮಹಿಳೆಯರ ಹಿತದೃಷ್ಟಿಯಿಂದ ಯುಸಿಸಿಯನ್ನು ಜಾರಿಗೆ ತರಬೇಕು ಇಲ್ಲದಿದ್ದರೆ ಬಹುಪತ್ನಿತ್ವ ಮುಂದುವರಿಯುತ್ತದೆ ಎಂದು ಹೇಳುವ ಮೂಲಕ ಅದನ್ನು ಬೆಂಬಲಿಸಿದ್ದರು.
ಬಿಜೆಪಿ 2019 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ, ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಅನುಷ್ಠಾನದ ಭರವಸೆ ನೀಡಿತ್ತು.
Uttarakhand | We have taken a decision to implement the Uniform Civil Code in the state. Uttarakhand will be the second state after Goa to implement this. We'll bring UCC for the people irrespective of them being from any religion & sect: CM Pushkar Singh Dhami in Champawat pic.twitter.com/WTk4M4MU14
— ANI UP/Uttarakhand (@ANINewsUP) May 27, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.