ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ವಿರುದ್ಧದ ನ್ಯಾಯಾಲಯದ ತೀರ್ಪಿಗೆ ಭಾರತವನ್ನು ಟೀಕಿಸುತ್ತಿರುವ OIC-IPHRC (ಇಸ್ಲಾಮಿಕ್ ಸಹಕಾರ ಸಂಘಟನೆ- ಸ್ವತಂತ್ರ ಶಾಶ್ವತ ಮಾನವ ಹಕ್ಕುಗಳ ಆಯೋಗ)ನ ಧೋರಣೆಯನ್ನು ಭಾರತ ಖಂಡಿಸಿದೆ.
OIC-IPHRC ನೀಡಿರುವ ಪ್ರತಿಕ್ರಿಯೆಗಳು ಸ್ವೀಕಾರಾರ್ಹವಲ್ಲ ಎಂದು ಭಾರತ ಹೇಳಿದೆ.
ವಿಶ್ವವು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯನ್ನು ಬಯಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ ಮತ್ತು ಯಾವುದೇ ರೀತಿಯಲ್ಲಿ ಭಯೋತ್ಪಾದನೆಯನ್ನು ಸಮರ್ಥಿಸಿಕೊಳ್ಳಬೇಡಿ ಎಂದು ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ಗೆ ಮನವಿ ಮಾಡಿದ್ದಾರೆ
“ಯಾಸಿನ್ ಮಲಿಕ್ ಪ್ರಕರಣದ ತೀರ್ಪಿಗೆ ಭಾರತವನ್ನು ಟೀಕಿಸುವ OIC-IPHRC ಕ್ರಮ ಸ್ವೀಕಾರಾರ್ಹವಲ್ಲ ಇದು ಯಾಸಿನ್ ಮಲಿಕ್ನ ಭಯೋತ್ಪಾದಕ ಚಟುವಟಿಕೆಗಳಿಗೆ ಪರೋಕ್ಷವಾಗಿ ಬೆಂಬಲವನ್ನು ವ್ಯಕ್ತಪಡಿಸುತ್ತದೆ” ಎಂದಿದ್ದಾರೆ.
ಮಲಿಕ್ ವಿರುದ್ಧದ ಎನ್ಐಎ ನ್ಯಾಯಾಲಯದ ತೀರ್ಪಿನ ಕುರಿತು ಒಐಸಿ-ಐಪಿಎಚ್ಆರ್ಸಿ ಮಾಡಿದ ಕಾಮೆಂಟ್ಗಳ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಬಾಗ್ಚಿ ಪ್ರತಿಕ್ರಿಯಿಸಿದರು.
“ಜಗತ್ತು ಭಯೋತ್ಪಾದನೆಯ ಶೂನ್ಯ ಸಹಿಷ್ಣುತೆಯನ್ನು ಬಯಸುತ್ತದೆ ಮತ್ತು ಅದನ್ನು ಯಾವುದೇ ರೀತಿಯಲ್ಲಿ ಸಮರ್ಥಿಸದಂತೆ ನಾವು OIC ಯನ್ನು ಒತ್ತಾಯಿಸುತ್ತೇವೆ” ಎಂದಿದ್ದಾರೆ.
ಭಯೋತ್ಪಾದನೆ-ಧನಸಹಾಯ ಪ್ರಕರಣದಲ್ಲಿ ವಿಶೇಷ ಎನ್ಐಎ ನ್ಯಾಯಾಲಯವು ಈ ಮಲಿಕ್ಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.