ಡೆಹ್ರಾಡೂನ್: ಉತ್ತರಾಖಂಡ ಸರ್ಕಾರವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ತಜ್ಞರ ಸಮಿತಿಯನ್ನು ರಚಿಸಿದೆ.
ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರು ಸಮಿತಿಯ ನೇತೃತ್ವ ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಎಲ್ಲಾ ಧಾರ್ಮಿಕ ಸಮುದಾಯಗಳಿಗೆ ಏಕರೂಪತೆಯನ್ನು ನೀಡುವ ಮತ್ತು ದೇವಭೂಮಿ ಉತ್ತರಾಖಂಡದ ಸಂಸ್ಕೃತಿಯನ್ನು ಸಂರಕ್ಷಿಸುವು ಉದ್ದೇಶವನ್ನು ಇದು ಹೊಂದಿದೆ ಎಂದು ಸಿಎಂ ಹೇಳಿದ್ದಾರೆ.
ಉತ್ತರಾಖಂಡ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಮ್ಮ ವಿಷನ್ ಡಾಕ್ಯುಮೆಂಟ್ನಲ್ಲಿ ಮಾಡಿದ ಬದ್ಧತೆಗೆ ಅನುಗುಣವಾಗಿ, ಗೌರವಾನ್ವಿತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಫೆಬ್ರವರಿಯಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರದಲ್ಲಿ, ಬಿಜೆಪಿ ಮತ್ತೆ ಅಧಿಕಾರಕ್ಕೆ ಆಯ್ಕೆಯಾದ ನಂತರ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರಲು ತಜ್ಞರ ಸಮಿತಿಯನ್ನು ಶೀಘ್ರದಲ್ಲೇ ರಚಿಸಲಾಗುವುದು ಎಂದು ಧಾಮಿ ಹೇಳಿದ್ದರು.
ಅದರಂತೆ ಏಕರೂಪ ನಾಗರಿಕ ಸಂಹಿತೆಯ ಕರಡು ರಚನೆಗೆ ಸಮಿತಿಯನ್ನು ರಚಿಸುವ ಪ್ರಸ್ತಾವನೆಯನ್ನು ಧಾಮಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಮೊದಲ ಸಭೆಯಲ್ಲಿಯೇ ಅಂಗೀಕರಿಸಲಾಯಿತು.
ಒಮ್ಮೆ ಜಾರಿಗೆ ಬಂದರೆ, ಗೋವಾ ನಂತರ ಇದನ್ನು ಜಾರಿಗೆ ತಂದ ಎರಡನೇ ರಾಜ್ಯ ಉತ್ತರಾಖಂಡವಾಗಲಿದೆ ಎಂದು ಧಾಮಿ ಹೇಳಿದರು.
ಗೋವಾ ಮತ್ತು ಉತ್ತರಾಖಂಡದ ಮಾದರಿಯನ್ನು ದೇಶದ ಉಳಿದ ರಾಜ್ಯಗಳೂ ಅನುಸರಿಸಬೇಕು ಎಂಬುದು ಧಾಮಿ ಅವರ ಅಭಿಪ್ರಾಯ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.