ನವದೆಹಲಿ: ಭಾರತೀಯರು ನಾಚಿಕೆಯಿಂದ ತಲೆ ತಗ್ಗಿಸುವಂತಹ ಯಾವ ಕೆಲಸವನ್ನೂ ನಾನು ಸರ್ಕಾರದ ಯಾರಿಗೂ ಮಾಡಲು ಬಿಡಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
“ಕಳೆದ ಎಂಟು ವರ್ಷಗಳಲ್ಲಿ ದೇಶ ಸೇವೆಯ ಯಾವುದೇ ಅವಕಾಶವನ್ನು ನಾನು ಕೈಚೆಲ್ಲಿಲ್ಲ. ಭಾರತೀಯರು ನಾಚಿಕೆಯಿಂದ ತಲೆ ತಗ್ಗಿಸುವಂತಹ ಯಾವುದೇ ಕೆಲಸಕ್ಕೆ ಅವಕಾಶ ನೀಡಿಲ್ಲ” ಎಂದಿದ್ದಾರೆ.
ಗುಜರಾತ್ನ ರಾಜ್ಕೋಟ್ ಜಿಲ್ಲೆಯ ಅಟ್ಕೋಟ್ ಪಟ್ಟಣದಲ್ಲಿ 200 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
“ಕಳೆದ ಎಂಟು ವರ್ಷಗಳಲ್ಲಿ, ಮಹಾತ್ಮ ಗಾಂಧಿ ಮತ್ತು ಸರ್ದಾರ್ ಪಟೇಲ್ ಕನಸು ಕಂಡಂತಹ ಭಾರತವನ್ನು ನಿರ್ಮಿಸಲು ನಾವು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿದ್ದೇವೆ” ಎಂದು ಅವರು ಹೇಳಿದರು.
ಅಧಿಕಾರದ ಅವಧಿಯಲ್ಲಿ ಸರ್ಕಾರ ಬಡವರ ಉನ್ನತಿಗಾಗಿ ಶ್ರಮಿಸಿದ್ದೇವೆ. ಮಹಾತ್ಮ ಗಾಂಧೀಜಿ ಮತ್ತು ಸರ್ದಾರ್ ಪಟೇಲರ ಕನಸಿನ ಭಾರತ ನಿರ್ಮಾಣಕ್ಕೆ ಪ್ರಮಾಣಿಕ ಪ್ರಯತ್ನ ಮಾಡಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.
“ನಾವು ಬಡವರ ಪರವಾದ ವಿವಿಧ ಯೋಜನೆಗಳ ಮೂಲಕ ದೇಶದ ಬಡವರಿಗೆ ಸೇವೆ ಸಲ್ಲಿಸಿದ್ದೇವೆ ಮತ್ತು ಅವರ ಜೀವನವನ್ನು ಉತ್ತಮಗೊಳಿಸಲು ಪ್ರಯತ್ನಿಸಿದ್ದೇವೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ, ಸರ್ಕಾರವು ಬಡವರಿಗೆ ಆಹಾರ ಧಾನ್ಯ ದಾಸ್ತಾನುಗಳನ್ನು ಪೂರೈಸಿತು ಮತ್ತು ಪ್ರತಿಯೊಬ್ಬ ನಾಗರಿಕರಿಗೂ ಲಸಿಕೆ ಹಾಕಿತುʼ ಎಂದಿದ್ದಾರೆ.
ಇಂದು ಅವರು ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ ‘ಸಹಕಾರ ಸೇ ಸಮೃದ್ಧಿ’ ವಿಷಯದ ಕುರಿತು ವಿವಿಧ ಸಹಕಾರಿ ಸಂಸ್ಥೆಗಳ ಮುಖಂಡರ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲಿ ಅವರು IFFCO, Kalo ನಲ್ಲಿ ನಿರ್ಮಿಸಲಾದ ನ್ಯಾನೋ ಯೂರಿಯಾ (ದ್ರವ) ಸ್ಥಾವರವನ್ನು ಸಹ ಉದ್ಘಾಟಿಸಲಿದ್ದಾರೆ.
ರಾಜ್ಯದ ವಿವಿಧ ಸಹಕಾರಿ ಸಂಸ್ಥೆಗಳಿಂದ 7 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ವಿಚಾರ ಸಂಕಿರಣದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.