ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಮುಂದುವರೆದಿದೆ. ರಾಹುಲ್ ಭಟ್ ಹತ್ಯೆ ಘಟನೆ ಮಾಸುವ ಮುನ್ನವೇ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ಹಿಂದೂ ಶಿಕ್ಷಕಿಯನ್ನು ಉಗ್ರರು ಗುಂಡಿಕ್ಕಿ ಕೊಲೆ ಮಾಡಲಾಗಿದೆ.
ಜಮ್ಮು ವಿಭಾಗದ ಸಾಂಬಾ ಜಿಲ್ಲೆಯ ರಾಜ್ ಕುಮಾರ್ ಅವರ ಪತ್ನಿ ರಜನಿ ಹತ್ಯೆಗೀಡಾದವರು ಎಂದು ಗುರುತಿಸಲಾಗಿದೆ. ಪರಿಶಿಷ್ಟ ಜಾತಿಯ ಹಿಂದೂ ಶಿಕ್ಷಕಿ ಕುಲ್ಗಾಮ್ ಜಿಲ್ಲೆಯ ಗೋಪಾಲ್ಪೋರಾ ಪ್ರೌಢಶಾಲೆಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯನ್ನು ಆಸ್ಪತ್ರೆಗೆ ತರುವಾಗಲೇ ಅವರು ಮೃತರಾಗಿದ್ದರ ಎಂದು ಕುಲ್ಗಾಮ್ ಜಿಲ್ಲಾ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.
ಹಂತಕರನ್ನು ಹಿಡಿಯಲು ಇಡೀ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.
ರಜನಿ ಅವರು ಜಮ್ಮು ಪ್ರಾಂತ್ಯದ ಸಾಂಬಾ ಜಿಲ್ಲೆಯವರಾಗಿದ್ದು, ದಕ್ಷಿಣ ಕಾಶ್ಮೀರದ ಕುಲ್ಗಾಮ್ ಪ್ರದೇಶದಲ್ಲಿ ಸರ್ಕಾರಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.
#KulgamTerrorIncidentUpdate: Injured lady teacher, a #Hindu & resident of Samba (Jammu division) #succumbed to her injuries. #Terrorists involved in this #gruesome #terror crime will be soon identified & neutralised.@JmuKmrPolice https://t.co/8rZR3dMmLY
— Kashmir Zone Police (@KashmirPolice) May 31, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.