ನವದೆಹಲಿ: ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮೋದಿ ಸರ್ಕಾರ ತನ್ನ ಎಂಟು ವರ್ಷಗಳ ಆಡಳಿತದಲ್ಲಿ ಹಿಂದೆಂದೂ ಸಾಧಿಸಿದ್ದಕ್ಕಿಂತ ಹೆಚ್ಚಿನ ಕೆಲಸವನ್ನು ಮಾಡಿದೆ ಮತ್ತು ನಮ್ಮ ಸರ್ಕಾರ ಕೃಷಿ ಸ್ನೇಹಿ ಯೋಜನೆಗಳು ರೈತರ ನಿಜವಾದ ಶಕ್ತಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಕಿಸಾನ್ ಸಮ್ಮಾನ್ ನಿಧಿಯ ಹನ್ನೊಂದನೇ ಕಂತಾಗಿ 80 ಕೋಟಿ ರೈತರಿಗೆ 21,000 ಕೋಟಿ ರೂ.ಗಳನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ ಸಂದರ್ಭದಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.
”ರೈತರನ್ನು ಸಬಲೀಕರಣಗೊಳಿಸಲು ಮತ್ತು ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮೋದಿ ಸರಕಾರ ಕಳೆದ ಎಂಟು ವರ್ಷಗಳಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಕೆಲಸವನ್ನು ಮಾಡಿದೆ” ಎಂದಿದ್ದಾರೆ.
”ಮೋದಿ ಸರಕಾರದ ಕೃಷಿ ಸ್ನೇಹಿ ಯೋಜನೆಗಳು ಇಂದು ರೈತರ ನಿಜವಾದ ಶಕ್ತಿಯಾಗಿ ಮಾರ್ಪಟ್ಟಿವೆ. ಈ ಕಂತಿನ ಕಿಸಾನ್ ಸಮ್ಮಾನ್ ನಿಧಿಯಡಿ ಇಂದು ಮೋದಿ 21,000 ಕೋಟಿಯನ್ನ ರೈತರಿಗೆ ವರ್ಗಾಯಿಸಿದ್ದಾರೆ,” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪ್ರಧಾನಮಂತ್ರಿಯವರು ವಿವಿಧ ಕೇಂದ್ರೀಯ ಯೋಜನೆಗಳ ಫಲಾನುಭವಿಗಳೊಂದಿಗೆ ವರ್ಚುವಲ್ ಆಗಿ ಸಂವಾದ ನಡೆಸಿದರು ಮತ್ತು ಅವರ ಸರ್ಕಾರದ ಎಂಟನೇ ವಾರ್ಷಿಕೋತ್ಸವವನ್ನು ಗುರುತಿಸಲು ನಡೆಸಿದ ಕಾರ್ಯಕ್ರಮದಲ್ಲಿ ಶಿಮ್ಲಾದಲ್ಲಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ 21,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.