ನವದೆಹಲಿ: ಕೊರೋನಾದಿಂದ ಸಂಕಷ್ಟಕ್ಕೀಡಾದ ಬೀದಿ ಬದಿ ವ್ಯಾಪಾರಿಗಳಿಗೆ ತಮ್ಮ ಜೀವನೋಪಾಯವನ್ನು ಮರಳಿ ಗಳಿಸುವ ಸಲುವಾಗಿ ಆತ್ಮನಿರ್ಭರ ಯೋಜನೆಯಡಿ ಪಿಎಂ ಸ್ವನಿಧಿ ಉಪಕ್ರಮವನ್ನು ಕೇಂದ್ರ ಅನುಷ್ಠಾನಕ್ಕೆ ತಂದು ಇಂದಿಗೆ ಎರಡು ವರ್ಷ. 2020ರ ಜೂನ್ 1 ರಿಂದ ಯೋಜನೆ ಜಾರಿಯಾಗಿದ್ದು, ಬೀದಿಬದಿ ವ್ಯಾಪಾರಿಗಳಿಗೆ ತಮ್ಮ ವ್ಯಾಪಾರ ವಹಿವಾಟುಗಳನ್ನು ಮತ್ತೆ ಆರಂಭಿಸಲು ಕೈಗೆಟುಕುವ ಸಾಲವನ್ನು ಇದು ನೀಡುತ್ತದೆ.
ಬೀದಿ ಬದಿ ವ್ಯಾಪಾರಿಗಳ ಸಬಲೀಕರಣಕ್ಕಾಗಿ ಜಾರಿಗೊಂಡ ಪಿಎಂ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ), ಕೈಗೆಟುಕುವ ಕಾರ್ಯಸಾಧ್ಯತೆ ಬಂಡವಾಳ ಸಾಲವನ್ನು ಪಡೆಯಲು ಬೀದಿ ಬದಿ ವ್ಯಾಪಾರಿಗಳಿಗೆ ಅನುವು ಮಾಡಿಕೊಡುವ ಕೇಂದ್ರ ವಲಯದ ಯೋಜನೆಯಾಗಿದೆ. ಇದರಡಿ ವ್ಯಾಪಾರಿಗಳು ತಲಾ ರೂ.10,000ವರೆಗೆ ಸಾಲ ಪಡೆಯಬಹುದು. 50 ಲಕ್ಷ ಬೀದಿ ಬದಿ ವ್ಯಾಪಾರಿಗಳನ್ನು ತಲುಪುವ ಗುರಿಯನ್ನು ಈ ಯೋಜನೆ ಹೊಂದಿದೆ.
2020ರ ಜೂನ್ 1ರಂದು ಆರಂಭಗೊಂಡ ಈ ಯೋಜನೆಗೆ, ಜುಲೈ 2ರಂದು ಸಾಲದ ಅರ್ಜಿ ಸಲ್ಲಿಕೆ ಪ್ರಾರಂಭವಾಯಿತು. ಮಾರ್ಚ್, 2022 ರವರೆಗೆ ಯೋಜನೆ ಅನುಷ್ಠಾನದಲ್ಲಿ ಇರುತ್ತದೆ ಎಂದು ಕೇಂದ್ರ ಹೇಳಿತ್ತು. ಆದರೀಗ ಯೋಜನೆಯನ್ನ ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.