ನವದೆಹಲಿ: ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಮೂರು ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ನಿನ್ನೆ ಸೆನೆಗಲ್ಗೆ ಆಗಮಿಸಿದ್ದಾರೆ. ಭೇಟಿಯ ಸಮಯದಲ್ಲಿ, ಅವರು ಅಲ್ಲಿನ ಅಧ್ಯಕ್ಷ ಮ್ಯಾಕಿ ಸಾಲ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆಗಳನ್ನು ನಡೆಸಲಿದ್ದಾರೆ ಮತ್ತು ರಾಷ್ಟ್ರೀಯ ಅಸೆಂಬ್ಲಿಯ ಅಧ್ಯಕ್ಷ ಮೌಸ್ತಫಾ ನಿಯಾಸ್ಸೆ ಮತ್ತು ಇತರ ಗಣ್ಯರನ್ನು ಭೇಟಿಯಾಗಲಿದ್ದಾರೆ.
ನಾಯ್ಡು ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವ ಡಾ. ಭಾರತಿ ಪವಾರ್ ಮತ್ತು ಮೂವರು ಸಂಸತ್ತಿನ ಸದಸ್ಯರು ಸೇರಿದಂತೆ ಉನ್ನತ ಮಟ್ಟದ ನಿಯೋಗದೊಂದಿಗೆ ಮೂರು ರಾಷ್ಟ್ರಗಳ ಪ್ರವಾಸದಲ್ಲಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ನಲ್ಲಿ, ಭಾರತ-ಸೆನೆಗಲ್ ರಾಜತಾಂತ್ರಿಕ ಸಂಬಂಧಗಳ 60 ವರ್ಷಗಳ ಸ್ಥಾಪನೆಯ ಸಂದರ್ಭದಲ್ಲಿ ಈ ಭೇಟಿ ನಡೆಯುತ್ತಿದೆ ಎಂದು ಹೇಳಿದ್ದಾರೆ.
ನಾಯ್ಡು ಗಬಾನ್ನಿಂದ ಸೆನೆಗಲ್ಗೆ ಆಗಮಿಸಿದ್ದಾರೆ. ಮಧ್ಯ ಆಫ್ರಿಕಾದೇಶವಾದ ಗಬಾನ್ನ್ನಲ್ಲಿ ಅವರು ಉನ್ನತ ನಾಯಕತ್ವ ಮತ್ತು ವ್ಯಾಪಾರ ಮುಖಂಡರೊಂದಿಗೆ ವ್ಯಾಪಕ ಮಾತುಕತೆ ನಡೆಸಿದ್ದಾರೆ.
ಈ ಭೇಟಿಯು ಆಫ್ರಿಕಾದೊಂದಿಗೆ ನಿಕಟವಾಗಿ ತೊಡಗಿಸಿಕೊಳ್ಳುವ ಭಾರತದ ಬದ್ಧತೆಯನ್ನು ಸೂಚಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
ಪ್ರವಾಸದ ಕೊನೆಯ ಹಂತವಾಗಿ ನಾಯ್ಡು ಅವರು ಜೂನ್ 4 ರಿಂದ ಜೂನ್ 7 ರವರೆಗೆ ಕತಾರ್ಗೆ ಭೇಟಿ ನೀಡಲಿದ್ದಾರೆ.
ನಾಯ್ಡು ಅವರ ಭೇಟಿಯು ಈ ಮೂರು ದೇಶಗಳಿಗೆ ಭಾರತೀಯ ಉಪ ರಾಷ್ಟ್ರಪತಿ ನೀಡುತ್ತಿರುವ ಮೊದಲ ಭೇಟಿಯಾಗಿದೆ. ಇದು ಗಬಾನ್ ಮತ್ತು ಸೆನೆಗಲ್ಗೆ ಭಾರತದ ಮೊದಲ ಉನ್ನತ ಮಟ್ಟದ ಭೇಟಿಯಾಗಿದೆ.
Vice President @MVenkaiahNaidu, accompanied by MoS @DrBharatippawar, MPs @SushilModi, @vijaypalbjp and @OPRavindhranath, & other delegation members, arrive to a warm welcome in Dakar, Senegal.
The visit coincides with 60 years of establishment of 🇮🇳🇸🇳 diplomatic relations. pic.twitter.com/5UnvqratGp
— Arindam Bagchi (@MEAIndia) June 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.