ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ “ಸಾಮ್ರಾಟ್ ಪೃಥ್ವಿರಾಜ್” ಸಿನಿಮಾದ ವಿಶೇಷ ಸ್ಕ್ರೀನಿಂಗ್ನಲ್ಲಿ ಪಾಲ್ಗೊಂಡರು ಮತ್ತು ಈ ಸಿನಿಮಾವನ್ನು ತೆರಿಗೆ ಮುಕ್ತ ಎಂದು ಘೋಷಿಸಿದರು.
ಲಕ್ನೋ ಲೋಕಭವನದಲ್ಲಿ ಚಿತ್ರದ ವಿಶೇಷ ಪ್ರದರ್ಶನ ನಡೆದಿದ್ದು, ಬಾಲಿವುಡ್ ಸೂಪರ್ಸ್ಟಾರ್ ಅಕ್ಷಯ್ ಕುಮಾರ್, ನಾಯಕಿ ಮಾನುಷಿ ಚಿಲ್ಲರ್ ಮತ್ತು ನಿರ್ದೇಶಕ ಚಂದ್ರಪ್ರಕಾಶ್ ದ್ವಿವೇದಿ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಚಿತ್ರ ತೆರಿಗೆ ಮುಕ್ತವಾಗಲಿದೆ ಎಂದು ನಾನು ಘೋಷಿಸುತ್ತೇನೆ ಎಂದು ಯೋಗಿ ಹೇಳಿದ್ದಾರೆ ಮತ್ತು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ನಮ್ಮ ಇತಿಹಾಸದ ಕುರಿತಾದ ಉತ್ತಮ ಕೌಟುಂಬಿಕ ಚಿತ್ರವಾಗಿದ್ದು, ಜನರು ಕುಟುಂಬ ಸಮೇತರಾಗಿ ವೀಕ್ಷಿಸಬೇಕು ಎಂದಿದ್ದಾರೆ.
ಮಾನುಷಿ ಚಿಲ್ಲರ್ ಅವರೊಂದಿಗೆ ಸ್ಕ್ರೀನಿಂಗ್ನಲ್ಲಿ ಹಾಜರಿದ್ದ ಅಕ್ಷಯ್ ಕುಮಾರ್ಗೆ ಮುಖ್ಯಮಂತ್ರಿಗಳು ಒಂದು ಉತ್ಪನ್ನ ಒಂದು ಜಿಲ್ಲೆ ಉತ್ಪನ್ನಗಳನ್ನು ಉಡುಗೊರೆಯಾಗಿ ನೀಡಿದರು.
UP | We announce that the movie 'Samrat Prithviraj' will be made tax-free in Uttar Pradesh so that a common man can also watch this movie: UP CM Yogi Adityanath in Lucknow pic.twitter.com/3cui55yA0O
— ANI UP/Uttarakhand (@ANINewsUP) June 2, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.