ನವದೆಹಲಿ: ಭಾರತವು ಆರೋಗ್ಯವನ್ನು ‘ಸೇವೆ’ ಎಂದು ಪರಿಗಣಿಸುತ್ತದೆ ಮತ್ತು ದೇಶವು ತನ್ನ ತರಬೇತಿ ಪಡೆದ ಮತ್ತು ಸಮರ್ಥ ಮಾನವಶಕ್ತಿಯ ಮೂಲಕ ಜಗತ್ತಿಗೆ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಪ್ರಮುಖ ಜಾಗತಿಕ ಪಾತ್ರವನ್ನು ವಹಿಸಲು ಸಿದ್ಧವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.
ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ವರ್ಚುವಲ್ ಸಂವಾದ ನಡೆಸಿದ ಅವರು, ಭಾರತವು ತನ್ನ ಅಭೂತಪೂರ್ವ ವೈದ್ಯಕೀಯ ಪ್ರವಾಸೋದ್ಯಮದ ಮೂಲಕ ‘Heal in India’ ಮಾತ್ರವಲ್ಲದೆ ‘Heal by India ಎಂಬ ಪ್ರಮುಖ ತಿರುವಿನ ಹಂತದಲ್ಲಿದೆ. ನಮ್ಮ ವೈದ್ಯಕೀಯ ವೃತ್ತಿಪರರು ನಮ್ಮ ದೇಶಕ್ಕೆ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲೂ ಸೇವೆ ಸಲ್ಲಿಸಲು ಮುಂದಾಗಬಹುದು ಎಂದಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಭಾರತ ಸರ್ಕಾರವು ಔಷಧಿಗಳ ಬೆಲೆಯನ್ನು ಹೆಚ್ಚಿಸದೆ 150 ಕ್ಕೂ ಹೆಚ್ಚು ದೇಶಗಳಿಗೆ ಔಷಧಿಗಳನ್ನು ಪೂರೈಸಿದೆ. ಇದಲ್ಲದೆ, ಭಾರತವು 100 ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಪೂರೈಸಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.