ನವದೆಹಲಿ: ಸುಗಂಧ ದ್ರವ್ಯ ಬ್ರಾಂಡ್ ಲೇಯರ್ ಹೊರ ತಂದಿರುವ ಹೊಸ ಬಾಡಿ ಸ್ಪ್ರೇ ‘SHOT’ ನ ವಿವಾದಾತ್ಮಕ ಜಾಹೀರಾತನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಆದೇಶಿಸಿದೆ.
ಇದಲ್ಲದೆ, ಜಾಹೀರಾತು ಸಂಹಿತೆ ಪ್ರಕಾರ ಜಾಹೀರಾತು ವಿರುದ್ಧ ವಿಚಾರಣೆ ನಡೆಸಲಾಗುತ್ತಿದೆ.
ಈ ಜಾಹೀರಾತು ‘ಅತ್ಯಾಚಾರ’ ದಂತಹ ವಿಕೃತಿಯನ್ನು ಉತ್ತೇಜಿಸುತ್ತಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗಳು ವ್ಯಕ್ತವಾಗುತ್ತಿದೆ. ಹೀಗಾಗಿ ಜಾಹೀರಾತು ಸಂಹಿತೆ ಪ್ರಕಾರ ವಿಚಾರಣೆ ನಡೆಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.
ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಈ ಜಾಹೀರಾತನ್ನು ಮೊದಲು ಪ್ರಸಾರ ಮಾಡಲಾಯಿತು.
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಈ ವಿಷಯ ಗಮನಕ್ಕೆ ಬಂದ ಬಳಿಕ ಜಾಹೀರಾತುಗಳನ್ನು ತೆಗೆದುಹಾಕುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.
ಲೇಯರ್ ಶಾಟ್ ಡಿಯೋಡರೆಂಟ್ ಜಾಹೀರಾತು ದೇಶದಲ್ಲಿ ಅತ್ಯಾಚಾರ ಮನಸ್ಥಿತಿಯನ್ನು ಸ್ಪಷ್ಟವಾಗಿ ಉತ್ತೇಜಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.
“ಎಫ್ಐಆರ್ ದಾಖಲಿಸಬೇಕು ಮತ್ತು ತಕ್ಷಣವೇ ಎಲ್ಲಾ ಪ್ಲಾಟ್ಫಾರ್ಮ್ಗಳಿಂದ ಜಾಹೀರಾತನ್ನು ತೆಗೆದುಹಾಕಬೇಕು ಎಂದು ನಾವು ದೆಹಲಿ ಪೊಲೀಸರಿಗೆ ಸೂಚನೆ ನೀಡಿದ್ದೇವೆ” ಎಂದು ಮಲಿವಾಲ್ ಹೇಳಿದ್ದಾರೆ
“ಈ ರೀತಿಯ ಜಾಹೀರಾತುಗಳು ಹೇಗೆ ಅನುಮೋದನೆ ಪಡೆಯುತ್ತವೆ, ಅನಾರೋಗ್ಯ ಮತ್ತು ಸಂಪೂರ್ಣ ಅಸಹ್ಯಕರವಾಗಿದೆ. ಲೇಯರ್ ಶಾಟ್ ವಿಕೃತಗಳಿಂದ ತುಂಬಿದೆಯೇ?” ಎಂದು ಒಬ್ಬರು ಟ್ವಿಟ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
How does this kind of ads get approved, sick and outright disgusting. Is @layerr_shot full of perverts? Second ad with such disgusting content from Shot.@monikamanchanda pic.twitter.com/hMEaJZcdmR
— Rishita💝 (@RishitaPrusty_) June 3, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.