ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು 1, 2, 5, 10 ಮತ್ತು 20 ರೂಪಾಯಿಗಳ ವಿಶೇಷ ಸರಣಿಯ ನಾಣ್ಯಗಳನ್ನು ಬಿಡುಗಡೆ ಮಾಡಿದರು. ಈ ವಿಶೇಷ ಸರಣಿಯ ನಾಣ್ಯಗಳು ಆಜಾದಿ ಕಾ ಅಮೃತ್ ಮಹೋತ್ಸವ್ ಲೋಗೋದ ಥೀಮ್ ಅನ್ನು ಹೊಂದಿದೆ ಮತ್ತು ದೃಷ್ಟಿಹೀನ ವ್ಯಕ್ತಿಗಳಿಗೆ ಸುಲಭವಾಗಿ ಗುರುತಿಸಬಹುದಾಗಿದೆ.
ಆಜಾದಿ ಕಾ ಅಮೃತ್ ಮಹೋತ್ಸವ್ ವಿನ್ಯಾಸದೊಂದಿ ಹೊರ ತರಲಾಗಿರುವ ರೂ 1, 2, 5, 10 ಮತ್ತು 20 ಮುಖಬೆಲೆಯ ನಾಣ್ಯಗಳು ಸ್ಮರಣಾರ್ಥ ನಾಣ್ಯಗಳಲ್ಲ, ಇವು ಚಲಾವಣೆಯಲ್ಲಿ ಇರಲಿವೆ.
“ಈ ಹೊಸ ಸರಣಿಯ ನಾಣ್ಯಗಳು ಅಮೃತ್ ಕಾಲ್ ಗುರಿಯನ್ನು ಜನರಿಗೆ ನೆನಪಿಸುತ್ತವೆ ಮತ್ತು ದೇಶದ ಅಭಿವೃದ್ಧಿಗೆ ಕೆಲಸ ಮಾಡಲು ಜನರನ್ನು ಪ್ರೇರೇಪಿಸುತ್ತವೆ” ಎಂದು ಹಣಕಾಸು ಸಚಿವಾಲಯ ಹೇಳಿದೆ.
ʼಐಕಾನಿಕ್ ವೀಕ್ ಸೆಲೆಬ್ರೇಷನ್ʼ ಭಾಗವಾಗಿ ಮೋದಿ ಅವರು 12 ಸರ್ಕಾರಿ ಯೋಜನೆಗಳ ಕ್ರೆಡಿಟ್-ಲಿಂಕ್ಡ್ ಪೋರ್ಟಲ್ ‘ಜನ್ ಸಮರ್ಥ್ ಪೋರ್ಟಲ್’ ಅನ್ನು ಸಹ ಪ್ರಾರಂಭಿಸಿದ್ದಾರೆ. ಈ ಪೋರ್ಟಲ್ ರಾಷ್ಟ್ರದ ಯುವಜನತೆ ಮತ್ತು ಸ್ಟಾರ್ಟಪ್ ಪರಿಸರ ವ್ಯವಸ್ಥೆಗೆ ಸಹಾಯ ಮಾಡಲಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಈ ಪೋರ್ಟಲ್ ವಿದ್ಯಾರ್ಥಿಗಳು, ರೈತರು, ಉದ್ಯಮಿಗಳು, ಎಂಎಸ್ಎಂಇ ಉದ್ಯಮಿಗಳ ಜೀವನವನ್ನು ಸುಧಾರಿಸುತ್ತದೆ ಮತ್ತು ಅವರ ಕನಸುಗಳನ್ನು ನನಸಾಗಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.
ಈ ಪ್ರತಿಯೊಂದು ಯೋಜನೆಗಳನ್ನು ಪೋರ್ಟಲ್ನಲ್ಲಿ ಪ್ರದರ್ಶಿಸಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.