ಪ್ರಗ್ಯು: ಜೆಕ್ ಗಣರಾಜ್ಯದಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಇಂದು ಅಲ್ಲಿನ ರಾಜಧಾನಿ ಪ್ರೇಗ್ನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು ಮತ್ತು ಸ್ವದೇಶದಲ್ಲಿನ ಬೆಳವಣಿಗೆಗಳು ಮತ್ತು ಭಾರತ-ಜೆಕ್ ಗಣರಾಜ್ಯದ ನಡುವಣ ದ್ವಿಪಕ್ಷೀಯ ಸಂಬಂಧವನ್ನು ಹಂಚಿಕೊಂಡರು.
ಅಲ್ಲಿರುವ ಭಾರತೀಯ ವಲಸಿಗರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಸಂತಸ ತಂದಿದೆ ಎಂದಿರುವ ಅವರು, ಸಮುದಾಯದ ವಿಸ್ತರಣೆಯು ಉತ್ತೇಜನಕಾರಿಯಾಗಿದೆ ಎಂದಿದ್ದಾರೆ.
ಭಾರತದಲ್ಲಿನ ಬೆಳವಣಿಗೆಗಳು ಮತ್ತು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿನ ಪ್ರಗತಿಯನ್ನು ಅವರೊಂದಿಗೆ ಹಂಚಿಕೊಂಡಿದ್ದಾರೆ. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಕಾಪಾಡಿಕೊಳ್ಳುವಲ್ಲಿ ಸಮುದಾಯದ ಕೊಡುಗೆಯನ್ನು ಅವರು ಶ್ಲಾಘಿಸಿದ್ದಾಋೆ.
“ಪ್ರೇಗ್ನಲ್ಲಿ ಭಾರತೀಯ ಸಮುದಾಯವನ್ನು ಭೇಟಿಯಾಗಲು ಸಂತೋಷವಾಯಿತು. ಅವರಲ್ಲಿ ಅನೇಕರು ಉತ್ತಮವಾಗಿ ಕಾರ್ಯನಿರ್ವಹಿಸುವುದನ್ನು ನೋಡಲು ಸಂತೋಷವಾಗಿದೆ. ಸಮುದಾಯದ ವಿಸ್ತರಣೆಯೂ ಉತ್ತೇಜನಕಾರಿಯಾಗಿದೆ. ತವರಿನ ಬೆಳವಣಿಗೆಗಳು ಮತ್ತು ನಮ್ಮ ದ್ವಿಪಕ್ಷೀಯ ಸಂಬಂಧದ ಸ್ಥಿತಿಯನ್ನು ಅವರೊಂದಿಗೆ ಹಂಚಿಕೊಂಡಿದ್ದೇನೆ. ಅವರ ನಿರಂತರ ಬೆಂಬಲವನ್ನು ನಿರೀಕ್ಷಿಸುತ್ತೇನೆ ”ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.