ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ, ಇಬ್ಬರು ಪಾಕಿಸ್ಥಾನಿ ಸೇರಿದಂತೆ ಮೂವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಉತ್ತರ ಕಾಶ್ಮೀರದಲ್ಲಿ 12 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಹೊಡೆದುರುಳಿಸಿವೆ.
ಕುಪ್ವಾರ ಜಿಲ್ಲೆಯ ಚಕ್ತಾರಸ್ ಕಂಡಿ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದ ಎನ್ಕೌಂಟರ್ನಲ್ಲಿ ಪಾಕಿಸ್ಥಾನದ ಒಬ್ಬ ಸೇರಿದಂತೆ ಇಬ್ಬರು ಎಲ್ಇಟಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದಕ್ಕೂ ಮೊದಲು, ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಲಷ್ಕರ್-ಎ-ತೊಯ್ಬಾದ ಮತ್ತೊಬ್ಬ ಪಾಕಿಸ್ಥಾನ ಭಯೋತ್ಪಾದಕನನ್ನು ಸಂಹರಿಸಿವೆ.
ಸೋಪೋರ್ನ ಜಲೂರಾ ಪ್ರದೇಶದ ಪಾನಿಪೋರಾ ಅರಣ್ಯದಲ್ಲಿ ನಿನ್ನೆ ಸಂಜೆ ಭದ್ರತಾ ಪಡೆಗಳ ಜಂಟಿ ತಂಡವು ಈ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಚಕಮಕಿ ನಡೆಯಿತು.
ಎನ್ಕೌಂಟರ್ ಸ್ಥಳದಲ್ಲಿ ವಶಪಡಿಸಿಕೊಂಡಿರುವ ದಾಖಲೆಗಳ ಪ್ರಕಾರ, ಹತನಾದ ಭಯೋತ್ಪಾದಕನನ್ನು ಪಾಕಿಸ್ತಾನದ ಲಾಹೋರ್ನ ಹಂಝಲ್ಲಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಬಳಿಯಿಂದ ಒಂದು ಎಕೆ ರೈಫಲ್, ಐದು ಮ್ಯಾಗಜೀನ್ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇಬ್ಬರು ವಿದೇಶಿ ಭಯೋತ್ಪಾದಕರು ಮತ್ತು ಒಬ್ಬ ಸ್ಥಳೀಯ ಭಯೋತ್ಪಾದಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.