ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ಬುಡಕಟ್ಟು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದ್ದಾರೆ.
ಉದ್ಘಾಟನಾ ಕಾರ್ಯಕ್ರಮವು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ‘ಆಜಾದಿ ಕಾ ಅಮೃತ್ ಮಹೋತ್ಸವ್’ ಆಚರಣೆಯ ಭಾಗವಾಗಿದೆ. ರಾಷ್ಟ್ರೀಯ ಬುಡಕಟ್ಟು ಸಂಶೋಧನಾ ಸಂಸ್ಥೆ ರಾಷ್ಟ್ರೀಯ ಮಟ್ಟದ ಪ್ರಮುಖ ಸಂಸ್ಥೆಯಾಗಲಿದ್ದು, ಇದು ಶೈಕ್ಷಣಿಕ, ಕಾರ್ಯನಿರ್ವಾಹಕ ಮತ್ತು ಶಾಸಕಾಂಗ ಕ್ಷೇತ್ರಗಳಲ್ಲಿನ ಬುಡಕಟ್ಟು ಕಾಳಜಿಗಳು, ಸಮಸ್ಯೆಗಳು ಮತ್ತು ವಿಷಯಗಳ ಮೇಲೆ ಕೇಂದ್ರೀಕೃತವಾಗಿರಲಿದೆ.
ಇದು ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಸಂಸ್ಥೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳು ಮತ್ತು ಸಂಪನ್ಮೂಲ ಕೇಂದ್ರಗಳೊಂದಿಗೆ ಸಹಯೋಗ ಮತ್ತು ಸಂಪರ್ಕ ಹೊಂದಿರುತ್ತದೆ. ಬುಡಕಟ್ಟು ಸಂಶೋಧನಾ ಸಂಸ್ಥೆಗಳು, ಸೆಂಟರ್ ಆಫ್ ಎಕ್ಸಲೆನ್ಸ್ ಯೋಜನೆಗಳನ್ನು ಮೇಲ್ವಿಚಾರಣೆ ಮಾಡುತ್ತದೆ ಮತ್ತು ಸಂಶೋಧನೆ ಮತ್ತು ತರಬೇತಿಯ ಗುಣಮಟ್ಟವನ್ನು ಸುಧಾರಿಸಲು ಮಾನದಂಡಗಳನ್ನು ಸ್ಥಾಪಿಸುತ್ತದೆ.
ಬುಡಕಟ್ಟು ವ್ಯವಹಾರಗಳ ಸಚಿವಾಲಯ ಮತ್ತು ರಾಜ್ಯ ಕಲ್ಯಾಣ ಇಲಾಖೆಗಳಿಗೆ ನೀತಿ ಸಲಹೆಗಳನ್ನ ಒದಗಿಸುವುದು, ಬುಡಕಟ್ಟು ಜೀವನಶೈಲಿಯ ಸಾಮಾಜಿಕ-ಆರ್ಥಿಕ ಅಂಶಗಳನ್ನು ಸುಧಾರಿಸುವ ಅಥವಾ ಬೆಂಬಲಿಸುವ ಅಧ್ಯಯನಗಳು ಮತ್ತು ಕಾರ್ಯಕ್ರಮಗಳನ್ನು ವಿನ್ಯಾಸಗೊಳಿಸುವ ಕಾರ್ಯ ಮಾಡಲಿದೆ.
ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ, ಕಾನೂನು ಸಚಿವ ಕಿರಣ್ ರಿಜಿಜು ಮತ್ತು ಇತರ ಕೇಂದ್ರ ಸಚಿವರು ಸಮಾರಂಭದಲ್ಲಿ ಭಾಗವಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.