ನವದೆಹಲಿ: ರಕ್ಷಣಾ ಸಹಕಾರವನ್ನು ಬಲಪಡಿಸುವ ಸಲುವಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿನ್ನೆ ವಿಯೆಟ್ನಾಂಗೆ ಬಂದಿಳಿದಿದ್ದಾರೆ. ಸಿಂಗ್ ವಿಯೆಟ್ನಾಂನಲ್ಲಿ ಒಟ್ಟು ಮೂರು ದಿನಗಳ ಭೇಟಿಯಲ್ಲಿರಲಿದ್ದಾರೆ.
ಈ ವೇಳೆ ಮಾತನಾಡಿರುವ ಅವರು, ಭಾರತ ಮತ್ತು ವಿಯೆಟ್ನಾಂ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಹಂಚಿಕೊಂಡಿದ್ದು, ರಕ್ಷಣಾ ಸಹಕಾರವು ಈ ಪಾಲುದಾರಿಕೆಯ ಪ್ರಮುಖ ಆಧಾರವಾಗಿದೆ ಎಂದು ಹೇಳಿದ್ದಾರೆ.
ಭಾರತದ ಆಕ್ಟ್ ಈಸ್ಟ್ ನೀತಿ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಯಲ್ಲಿ ವಿಯೆಟ್ನಾಂ ಪ್ರಮುಖ ಪಾಲುದಾರ ಎಂದು ಅವರು ಹೇಳಿದರು.
ಸರಣಿ ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್ ಅವರು, ಭೇಟಿಯ ಸಮಯದಲ್ಲಿ ವಿಯೆಟ್ನಾಂ ಅಧ್ಯಕ್ಷ ನ್ಗುಯೆನ್ ಕ್ಸುವಾನ್ ಫುಕ್ ಮತ್ತು ಪ್ರಧಾನಿ ಫಾಮ್ ಮಿನ್ ಚಿನ್ಹ್ ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. ಅಲ್ಲಿನ ರಕ್ಷಣಾ ಸಚಿವ ಜನರಲ್ ಫಾನ್ ವ್ಯಾನ್ ಗಿಯಾಂಗ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಇಬ್ಬರೂ ಮಂತ್ರಿಗಳು ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರವನ್ನು ಪರಿಶೀಲಿಸುತ್ತಾರೆ ಮತ್ತು ರಕ್ಷಣಾ ಕಾರ್ಯಗಳನ್ನು ಮತ್ತಷ್ಟು ಬಲಪಡಿಸಲು ಹೊಸ ಉಪಕ್ರಮಗಳನ್ನು ಅನ್ವೇಷಿಸುತ್ತಾರೆ.
ಹೈ ಫಾಂಗ್ನಲ್ಲಿರುವ ಹಾಂಗ್ ಹಾ ಶಿಪ್ಯಾರ್ಡ್ನಲ್ಲಿ, ಭಾರತ ಸರ್ಕಾರದ 100 ಮಿಲಿಯನ್ ಯುಎಸ್ ಡಾಲರ್ ಡಿಫೆನ್ಸ್ ಲೈನ್ ಆಫ್ ಕ್ರೆಡಿಟ್ ಅಡಿಯಲ್ಲಿ ನಿರ್ಮಿಸಲಾದ 12 ಹೈಸ್ಪೀಡ್ ಗಾರ್ಡ್ ಬೋಟ್ಗಳ ಹಸ್ತಾಂತರ ಸಮಾರಂಭದ ಅಧ್ಯಕ್ಷತೆಯನ್ನು ರಾಜನಾಥ್ ಸಿಂಗ್ ವಹಿಸಲಿದ್ದಾರೆ.
ಭಾರತ ಸರ್ಕಾರದ ಅನುದಾನದೊಂದಿಗೆ ಆರ್ಮಿ ಸಾಫ್ಟ್ವೇರ್ ಪಾರ್ಕ್ ಅನ್ನು ಸ್ಥಾಪಿಸಲಾಗುತ್ತಿರುವ ದೂರಸಂಪರ್ಕ ವಿಶ್ವವಿದ್ಯಾಲಯ ಸೇರಿದಂತೆ ನ್ಹಾ ಟ್ರಾಂಗ್ನಲ್ಲಿರುವ ವಿಯೆಟ್ನಾಂನ ತರಬೇತಿ ಸಂಸ್ಥೆಗಳಿಗೂ ಸಿಂಗ್ ಭೇಟಿ ನೀಡಲಿದ್ದಾರೆ. ಅವರು ಹನೋಯ್ನಲ್ಲಿರುವ ಭಾರತದ ರಾಯಭಾರ ಕಚೇರಿ ಆಯೋಜಿಸವ ಸಮುದಾಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.