ನವದೆಹಲಿ: ಭಯೋತ್ಪಾದಕ ಸಂಘಟನೆ ಆಲ್ ಖೈದಾ ದೆಹಲಿ, ಮುಂಬೈ, ಗುಜರಾತ್ ಮತ್ತು ಉತ್ತರಪ್ರದೇಶದಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದೆ.
ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮ ಅವರು ಪ್ರವಾದಿ ಮಹಮ್ಮದ್ ಅವರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಈ ದಾಳಿ ಬೆದರಿಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಜೂನ್ 6ರಂದು ಈ ಬೆದರಿಕೆ ಬಂದಿದ್ದು, ಪ್ರವಾದಿಯ ಘನತೆಗಾಗಿ ಹೋರಾಡಿ ಎಂದು ಕರೆ ನೀಡಲಾಗಿದೆ. “ದೆಹಲಿ ಮತ್ತು ಮುಂಬೈ ಮತ್ತು ಉತ್ತರ ಪ್ರದೇಶ ಮತ್ತು ಗುಜರಾತಿನಲ್ಲಿ ಕೇಸರಿ ಭಯೋತ್ಪಾದಕರು ತಮ್ಮ ಅಂತ್ಯವನ್ನು ಕಾಣಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
“ಮಾನವೀಯತೆಯ ಹೆಮ್ಮೆಯ ಪ್ರವಾದಿ ಮೊಹಮ್ಮದ್ ಅವರ ಅವಹೇಳನಕಾರರಿಗೆ ಯಾವುದೇ ಕ್ಷಮಾದಾನ ಅಥವಾ ಕ್ಷಮೆ ಸಿಗುವುದಿಲ್ಲ, ಯಾವುದೇ ಶಾಂತಿ ಮತ್ತು ಭದ್ರತೆ ಅವರು ಪಡೆಯಲ ಸಾಧ್ಯವಿಲ್ಲ ಮತ್ತು ಖಂಡನೆಯ ಯಾವುದೇ ಪದಗಳೊಂದಿಗೆ ಈ ವಿಷಯವನ್ನು ಮುಚ್ಚಿ ಹಾಕಲು ಸಾಧ್ಯವಿಲ್ಲ” ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿದೆ.
“ನಮ್ಮ ಪ್ರವಾದಿಯನ್ನು ಅವಮಾನಿಸುವವರನ್ನು ನಾವು ಕೊಲ್ಲುತ್ತೇವೆ ಮತ್ತು ನಮ್ಮ ಪ್ರವಾದಿಯನ್ನು ಅವಮಾನಿಸಲು ಧೈರ್ಯವಿರುವವರನ್ನು ಸ್ಫೋಟಿಸಲು ನಾವು ನಮ್ಮ ದೇಹ ಮತ್ತು ನಮ್ಮ ಮಕ್ಕಳ ದೇಹಗಳಲ್ಲಿ ಸ್ಫೋಟಕಗಳನ್ನು ತುಂಬುತ್ತೇವೆ” ಎಂದು ಅಲ್-ಖೈದಾ ಹೇಳಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.