ನವದೆಹಲಿ: ಶ್ರೀಲಂಕಾಗೆ ಆರ್ಥಿಕ ನೆರವು ನೀಡುತ್ತಿರುವ ಭಾರತವನ್ನು ಶ್ಲಾಘಿಸುವ ಮೂಲಕ ಚೀನಾ ಅಚ್ಚರಿ ಮೂಡಿಸಿದೆ. ಅಲ್ಲದೇ ಚೀನಾ ತನ್ನ ಕಾರ್ಯತಾಂತ್ರಿಕ ಆದ್ಯತೆಯನ್ನು ದಕ್ಷಿಣ ಏಷ್ಯಾದಿಂದ ಆಗ್ನೇಯ ಏಷ್ಯಾಗೆ ವರ್ಗಾಯಿಸಿದೆ ಎಂಬ ಶ್ರೀಲಂಕಾ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಅವರ ಟೀಕೆಗಳನ್ನು ಚೀನಾ ನಿರಾಕರಿಸಿದೆ ಮತ್ತು ದಕ್ಷಿಣ ಏಷ್ಯಾ ಈಗಲೂ ನನ್ನ ಆದ್ಯತೆಯಾಗಿ ಉಳಿದಿದೆ ಎಂದು ಹೇಳಿದೆ.
ಶ್ರೀಲಂಕಾ 1948ರಲ್ಲಿ ಬ್ರಿಟಿಷರಿಂದ ಸ್ವಾತಂತ್ರ್ಯವನ್ನು ಪಡೆದ ಬಳಿಕ ಮೊದಲ ಬಾರಿಗೆ ದೊಡ್ಡ ಮಟ್ಟದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದರಿಂದಾಗಿ ಅಲ್ಲಿ ಕಾನೂನು ಸುವ್ಯವಸ್ಥೆ ಮತ್ತು ರಾಜಕೀಯ ಅಸ್ಥಿರತೆ ಕೂಡ ಸೃಷ್ಟಿಯಾಗಿದೆ.
“ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟನ್ನು ನಿವಾರಿಸುವ ಸಲುವಾಗಿ ಭಾರತ ಸರ್ಕಾರವು ಸಾಕಷ್ಟು ಕಾರ್ಯ ಮಾಡಿದೆ ಎಂಬುದನ್ನು ನಾವು ಗಮನಿಸಿದ್ದೇವೆ. ಭಾರತದ ಈ ಪ್ರಯತ್ನಗಳನ್ನು ನಾವು ಶ್ಲಾಘಿಸುತ್ತೇವೆ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಗೆ ನೆರವು ನೀಡಲು ಚೀಲ ಹಿಂದೇಟು ಹಾಕುತ್ತಿದೆ ಎಂಬ ಆರೋಪವನ್ನು ಅವರು ತಳ್ಳಿಹಾಕಿದ್ದು, ಶ್ರೀಲಂಕಾ ಮತ್ತು ಇತರ ಕಷ್ಟ ಅನುಭವಿಸುತ್ತಿರುವ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಸಹಾಯ ಮಾಡಲು ಭಾರತ ಮತ್ತು ಉಳಿದ ಅಂತರಾಷ್ಟ್ರೀಯ ಸಮುದಾಯದೊಂದಿಗೆ ಕೆಲಸ ಮಾಡಲು ಚೀನಾ ಸಿದ್ಧವಾಗಿದೆ ಎಂದಿದ್ದಾರೆ.
ಭಾರತವು ಲೈನ್ ಕ್ರೆಡಿಟ್ ಮತ್ತು ಇತರ ವಿಧಾನಗಳ ರೂಪದಲ್ಲಿ ಸುಮಾರು USD 3 ಶತಕೋಟಿ ಸಹಾಯವನ್ನು ಶ್ರೀಲಂಕಾಗೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.