ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧವು ಇಂಧನ, ಆಹಾರ ಮತ್ತು ರಸಗೊಬ್ಬರಗಳ ಬಿಕ್ಕಟ್ಟು ಎದುರಾಗುವಂತೆ ಮಾಡಿದೆ, ಇದು ಹಸಿವಿನ ಪರಿಸ್ಥಿತಿಗಳಿಗೆ ಕಾರಣವಾಗುತ್ತಿದೆ ಮತ್ತು ಹಣದುಬ್ಬರದ ಪರಿಣಾಮವನ್ನು ಬೀರುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ನರೇಂದ್ರ ಮೋದಿ ಸರ್ಕಾರದ ಎಂಟು ವರ್ಷಗಳ ರಾಷ್ಟ್ರೀಯ ಭದ್ರತೆಯ ಕುರಿತು ಮಾತನಾಡಿದ ಅವರು, “ಉಕ್ರೇನ್ನಲ್ಲಿನ ಪರಿಸ್ಥಿತಿಯ ಪರಿಣಾಮಗಳಿಂದಾಗಿ ನಾವು ಮೂರು ಬಿಕ್ಕಟ್ಟು ಎದುರಿಸಬೇಕಾಗಿದೆ. ಅದೆಂದರೆ ಇಂಧನ, ಆಹಾರ ಮತ್ತು ರಸಗೊಬ್ಬರದ ಬಿಕ್ಕಟ್ಟು. ಈ ಮೂರರ ಬೆಲೆಗಳು ಹೆಚ್ಚಿವೆ. ಅವು ಬಹಳ ಗಮನಾರ್ಹವಾದ ಹಣದುಬ್ಬರದ ಪ್ರಭಾವವನ್ನು ಹೊಂದಿವೆ” ಎಂದರು.
“ಆಹಾರದ ವಿಷಯದಲ್ಲಿ, ಅವು ನಿಜವಾಗಿಯೂ ಹಸಿವಿನ ಪರಿಸ್ಥಿತಿಗಳಿಗೆ ಕಾರಣವಾಗುತ್ತಿದೆ. ರಸಗೊಬ್ಬರದ ವಿಷಯದಲ್ಲಿ ಮುಂದಿನ ಸುಗ್ಗಿಯ ತನಕ ಹಲವು ರಾಷ್ಟ್ರಗಳಲ್ಲಿ ಸಮಸ್ಯೆ ಸೃಷ್ಟಿಯಾಗುತ್ತದೆ” ಎಂದಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ದೇಶವು ನಾಲ್ಕು ಪ್ರಮುಖ ಸವಾಲುಗಳನ್ನು ಎದುರಿಸಿದೆ ಎಂದು ಸಚಿವರು ಹೇಳಿದರು. ಈ ನಾಲ್ಕು ಸಮಸ್ಯೆಗಳು ಕೋವಿಡ್-19, ನೈಜ ನಿಯಂತ್ರಣ ರೇಖೆಯ ಉದ್ದಕ್ಕೂ ಚೀನಾದೊಂದಿಗಿನ ಉದ್ವಿಗ್ನತೆ, ಅಫ್ಘಾನಿಸ್ತಾನದ ಪರಿಸ್ಥಿತಿ ಮತ್ತು ಉಕ್ರೇನ್ ಯುದ್ಧ.
ಈ ನಾಲ್ಕು ಪ್ರಮುಖ ಘಟನೆಗಳು ದೂರದ ಯಾವುದೋ ಒಂದು ರಾಷ್ಟ್ರದ ಪರಿಸ್ಥಿತಿ ಜಗತ್ತಿನ ಮೇಲೆ ಹೇಗೆ ನೇರ ಪರಿಣಾಮ ಬೀರುತ್ತದೆ ಎಂಬುದನ್ನು ತೋರಿಸಿದೆ ಎಂದು ಜೈಶಂಕರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.