ನವದೆಹಲಿ: ಅನೇಕ ಭಾರತೀಯ ಇತಿಹಾಸಕಾರರು ಮೊಘಲ್ ಇತಿಹಾಸವನ್ನು ದಾಖಲಿಸುವುದಕ್ಕೆ ಮಾತ್ರ ಪ್ರಾಮುಖ್ಯತೆ ನೀಡಿದ್ದಾರೆ, ಪಾಂಡ್ಯರು, ಚೋಳರು, ಮೌರ್ಯರು, ಗುಪ್ತರು ಮತ್ತು ಅಹೋಮ್ಗಳಂತಹ ಅನೇಕ ಸಾಮ್ರಾಜ್ಯಗಳ ಅದ್ಭುತ ಕೊಡುಗೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ‘ಮಹಾರಾಣಾ: ಸಹಸ್ತ್ರ ವರ್ಷ ಕಾ ಧರ್ಮ ಯುದ್ಧ್’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಶಾ ಈ ಹೇಳಿಕೆ ನೀಡಿದ್ದಾರೆ.
“ನಮ್ಮಲ್ಲಿ ಅನೇಕ ಸಾಮ್ರಾಜ್ಯಗಳಿವೆ ಆದರೆ ಇತಿಹಾಸಕಾರರು ಮೊಘಲರ ಮೇಲೆ ಮಾತ್ರ ಕೇಂದ್ರೀಕರಿಸಿ, ಅವರ ಬಗ್ಗೆಯೇ ಹೆಚ್ಚಾಗಿ ಬರೆದಿದ್ದಾರೆ. ಪಾಂಡ್ಯ ಸಾಮ್ರಾಜ್ಯವು 800 ವರ್ಷಗಳ ಕಾಲ ಆಳಿತು. ಅಹೋಮ್ ಸಾಮ್ರಾಜ್ಯವು 650 ವರ್ಷಗಳ ಕಾಲ ಅಸ್ಸಾಂ ಅನ್ನು ಆಳಿತು ಮತ್ತ ಭಕ್ತಿಯಾರ್ ಖಲ್ಜಿ, ಔರಂಗಜೇಬರನ್ನು ಸೋಲಿಸಿ ಅಸ್ಸಾಂನ ಸಾರ್ವಭೌಮತ್ವವನ್ನು ಸಹ ಉಳಿಸಿಕೊಂಡಿತು. ಪಲ್ಲವ ಸಾಮ್ರಾಜ್ಯವು 600 ವರ್ಷಗಳ ಕಾಲ ಆಳಿತು, ಚೋಳರು 600 ವರ್ಷಗಳ ಕಾಲ ಆಳಿದರು”ಎಂದು ಶಾ ಹೇಳಿದ್ದಾರೆ.
“ಮೌರ್ಯರು ಇಡೀ ದೇಶವನ್ನು ಅಫ್ಘಾನಿಸ್ತಾನದಿಂದ ಲಂಕಾದವರೆಗೆ 550 ವರ್ಷಗಳ ಕಾಲ ಆಳಿದರು. ಸಾತವಾಹನರು 500 ವರ್ಷಗಳ ಕಾಲ ಆಳಿದರು. ಗುಪ್ತರು 400 ವರ್ಷಗಳ ಕಾಲ ಆಳಿದರು ಮತ್ತು ಸಮುದ್ರಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ರಚಿಸಿದ ಮತ್ತು ಸಾಮ್ರಾಜ್ಯವನ್ನು ಸ್ಥಾಪಿಸಿದ, ಆದರೆ ಅವರ ಬಗ್ಗೆ ಪುಸ್ತಕದಲ್ಲ ಹೆಚ್ಚಿನ ಯಾವುದೇ ಉಲ್ಲೇಖವಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.
ಈ ಸಾಮ್ರಾಜ್ಯಗಳ ಬಗ್ಗೆ ಪುಸ್ತಕಗಳನ್ನು ಬರೆಯಬೇಕು. ಇದರಿಂದ ಸತ್ಯ ಹೊರಹೊಮ್ಮುತ್ತದೆ ಮತ್ತು ನಾವು ತಪ್ಪು ನಂಬಿರುವ ಇತಿಹಾಸವು ಕ್ರಮೇಣ ಮರೆಯಾಗುತ್ತದೆ ಎಂದು ಹೇಳಿದರು.
ಇತಿಹಾಸವನ್ನು ಘಟನೆಯ ಫಲಿತಾಂಶದ ಆಧಾರದ ಮೇಲೆ ಬರೆಯಲಾಗುತ್ತದೆ, ಗೆಲುವು ಅಥವಾ ಸೋಲಿನ ಮೇಲೆ ಅಲ್ಲ ಎಂದು ಅವರು ಹೇಳಿದರು.
ಸರ್ಕಾರ ಮತ್ತು ಪುಸ್ತಕಗಳ ಲೆಕ್ಕದಲ್ಲಿ ಇತಿಹಾಸ ನಿರ್ಮಾಣವಾಗುವುದಿಲ್ಲ ಎಂದ ಶಾ, ಘಟನೆಗಳ ಆಧಾರದ ಮೇಲೆ ಸತ್ಯವನ್ನು ರಚಿಸಲಾಗಿದೆ. ಸತ್ಯವನ್ನು ಬರೆಯುವುದನ್ನು ತಡೆಯಲು ಸಾಧ್ಯವಿಲ್ಲ. ನಾವು ಈಗ ಸ್ವತಂತ್ರರಾಗಿದ್ದೇವೆ. ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು ಎಂದು ಒತ್ತಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.