ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನಿನ್ನೆ ಗುಜರಾತ್ನ ಗಾಂಧಿನಗರ ಬಳಿಯ ಲಾವಡ್ನಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (ಆರ್ಆರ್ಯು)ಕ್ಕೆ ಭೇಟಿ ನೀಡಿದ್ದಾರೆ.
ದೋವಲ್ ಅವರು ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ರಾಜಿಂದರ್ ಖನ್ನಾ ಮತ್ತು ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ಇತರ ಸದಸ್ಯರ ಜೊತೆ ಸೇರಿ ವಿಶ್ವವಿದ್ಯಾನಿಲಯದಲ್ಲಿನ ಶೈಕ್ಷಣಿಕ ಮತ್ತು ಸಂಶೋಧನಾ ಸೌಲಭ್ಯವನ್ನು ಮೌಲ್ಯಮಾಪನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಲ್ಲಿ ಜಿಯೋ-ಇಂಟೆಲಿಜೆನ್ಸ್ ಸಿಸ್ಟಮ್ಸ್, ಓಪನ್ ಸೋರ್ಸ್ ಇಂಟೆಲಿಜೆನ್ಸ್ (OSINT), ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI), ಮಾಹಿತಿ ತಂತ್ರಜ್ಞಾನ ಲ್ಯಾಬ್ಗಳ ಕುರಿತು ವಿವರವಾದ ಮಾಹಿತಿಯನ್ನು ಅವರು ಪಡೆದುಕೊಂಡಿದ್ದಾರೆ.
ಪೊಲೀಸ್ ಆಡಳಿತ, ರಕ್ಷಣಾ ಮತ್ತು ಕಾರ್ಯತಂತ್ರದ ಅಧ್ಯಯನಗಳು, ಕಡಲ ಮತ್ತು ಕರಾವಳಿ ಭದ್ರತೆ, ಮಾಹಿತಿ ತಂತ್ರಜ್ಞಾನ ಮತ್ತು AI, ಅಪರಾಧಶಾಸ್ತ್ರ ಮತ್ತು ವರ್ತನಾ ವಿಜ್ಞಾನಗಳು ಮತ್ತು ಅಂತರರಾಷ್ಟ್ರೀಯ ಸಂಬಂಧಗಳು ಮತ್ತು ಕಾರ್ಯತಂತ್ರದ ಭಾಷೆಗಳ ಡೊಮೇನ್ನಲ್ಲಿ ವಿಶ್ವವಿದ್ಯಾಲಯವು ನಡೆಸುತ್ತಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆಯೂ ಅವರು ವಿವರ ಪಡೆದರು.
ಅಧಿಕೃತ ಮೂಲಗಳ ಪ್ರಕಾರ, ರಾಷ್ಟ್ರೀಯ ಭದ್ರತಾ ಸಲಹೆಗಾರರು ವಿಶ್ವವಿದ್ಯಾನಿಲಯವನ್ನು ಕಡಿಮೆ ಅವಧಿಯಲ್ಲಿ ಅದರ ಯಶಸ್ಸು ಮತ್ತು ಸಾಧನೆಗಳಿಗಾಗಿ ಅಭಿನಂದಿಸಿದ್ದಾರೆ. ವಿಶ್ವವಿದ್ಯಾನಿಲಯವು ಪ್ರಾಯೋಗಿಕ ಸಂಶೋಧನಾ ಮಾದರಿಯನ್ನು ಅಳವಡಿಸಿಕೊಳ್ಳಬೇಕು ಮತ್ತು ರಾಷ್ಟ್ರಗಳ ಅತ್ಯಂತ ಪ್ರಮುಖ ಭದ್ರತಾ ಸವಾಲುಗಳನ್ನು ನಕ್ಷೆ ಮಾಡಲು ಮತ್ತು ಅರ್ಥಮಾಡಿಕೊಳ್ಳಲು ಪರಿಹಾರ-ಆಧಾರಿತ ವಿಧಾನವನ್ನು ಅಭಿವೃದ್ಧಿಪಡಿಸಬೇಕು ಎಂದು ದೋವಲ್ ಒತ್ತಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.