ನವದೆಹಲಿ: ಭಾರತಕ್ಕೆ ಅಗತ್ಯವಾಗಿ ಬೇಕಾದ ಉಗ್ರ ಹಫೀಜ್ ಸೈಯದ್ ಮತ್ತು ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಸೆರೆಹಿಡಿಯಲು ಭಾರತ ಸಾಧ್ಯವಿರುವ ಎಲ್ಲಾ ಮಾರ್ಗಗಳ ಮೂಲಕ ಪ್ರಯತ್ನಿಸಲಿದೆ ಎಂದು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್ ತಿಳಿಸಿದ್ದಾರೆ.
ನಿಗೂಢ ಅಥವಾ ವಿಶೇಷ ಕಾರ್ಯಾಚರಣೆಗಳ ಮೂಲಕವೂ ಈ ಇಬ್ಬರು ಪಾತಕಿಗಳನ್ನು ಹಿಡಿಯಲು ಸರ್ಕಾರ ಪ್ರಯತ್ನಿಸಲಿದೆ ಎಂದು ಅವರು ಖಾಸಗಿ ಚಾನೆಲ್ವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಯನ್ಮಾರ್ನ ಗಡಿ ದಾಟಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದಂತೆ ದಾವೂದ್, ಹಫೀಜ್ ವಿರುದ್ಧ ಯಾಕೆ ಕಾರ್ಯಾಚರಣೆ ನಡೆಸಲಾಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ರೀತಿಯ ಕಾರ್ಯಾಚರಣೆ ನಡೆಸುವ ಸಾಧ್ಯತೆ ಇದೆ ಆದರೆ ಅದನ್ನು ನಡೆಸುವುದಕ್ಕಿಂತ ಮುಂಚೆ ಹೇಳಲಾಗುವುದಿಲ್ಲ’ ಎಂದಿದ್ದಾರೆ.
ಅಲ್ಲದೇ ಮಾತುಕತೆಯ ಮೂಲಕ ಪಾಕಿಸ್ಥಾನ ಮತ್ತು ಭಾರತ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳವುದು ಉತ್ತಮ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.