ಶ್ರೀನಗರ: ಇತ್ತೀಚೆಗೆ ಇಬ್ಬರು ಪೊಲೀಸ್ ಸಿಬ್ಬಂದಿಯ ಹತ್ಯೆಯಲ್ಲಿ ಭಾಗಿಯಾಗಿದ್ದ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕ ಆದಿಲ್ ಪರ್ರೆ ಭಾನುವಾರ ಜಮ್ಮುವಿನ ಶ್ರೀನಗರದ ಪಾಲ್ಪೋರಾ ಪ್ರದೇಶದ ಕ್ರೆಶ್ವಾಲ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಶ್ರೀನಗರ ಪೊಲೀಸರ ಸಣ್ಣ ತಂಡ ನಡೆಸಿದ ಎನ್ಕೌಂಟರ್ನಲ್ಲಿ ಪರ್ರೆ ಕೊಲ್ಲಲ್ಪಟ್ಟ, ಈತ ಎಲ್ಇಟಿ ಭಯೋತ್ಪಾದಕನಾಗಿದ್ದು ಸೆಪ್ಟೆಂಬರ್ 2021 ರಿಂದ ಸಕ್ರಿಯವಾಗಿದ್ದ ಎಂದು ಹೇಳಿದ್ದಾರೆ.
ಕಾಶ್ಮೀರದ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕಾಶ್ಮೀರ ವಿಜಯ್ ಕುಮಾರ್ ಅವರು ಈ ಬಗ್ಗೆ ಮಾಹಿತಿ ನೀಡಿ, ಉದ್ದೇಶಿತ ಹತ್ಯೆಗಳಲ್ಲಿ ಮೋಸ್ಟ್ ವಾಂಟೆಡ್ ಭಯೋತ್ಪಾದಕನಾಗಿದ್ದ ಪರ್ರೆಯ ಹತ್ಯೆ ಪೊಲೀಸರಿಗೆ ದೊಡ್ಡ ಯಶಸ್ಸು ಎಂದು ಬಣ್ಣಿಸಿದ್ದಾರೆ.
ಸಂಗಮ್ನಲ್ಲಿ ನಮ್ಮ ಹುತಾತ್ಮರಾದ ಪೊಲೀಸ್ ಹಸನ್ ದಾರ್ ಮತ್ತು ಅಂಚಾರ್ ಸೌರಾದಲ್ಲಿ ಹುತಾತ್ಮರಾದ ಸೈಫುಲ್ಲಾ ಖಾದ್ರಿ ಮತ್ತು ಮೇ ತಿಂಗಳಲ್ಲಿ ಶ್ರೀನಗರ ಜಿಲ್ಲೆಯಲ್ಲಿ 9 ವರ್ಷದ ಬಾಲಕಿಯ ಮೇಲೆ ದಾಳಿ ಸೇರಿದಂತೆ ಹಲವು ಉದ್ದೇಶಿತ ಹತ್ಯೆಗಳಲ್ಲಿ ಅವನು ಭಾಗಿಯಾಗಿದ್ದ ಎಂದು ಕುಮಾರ್ ಹೇಳಿದ್ದಾರೆ.
ಶ್ರೀನಗರ ಜಿಲ್ಲೆಯ ಹೊರವಲಯದಲ್ಲಿರುವ ಕ್ರೀಸ್ಬಾಲ್ ಪಾಲ್ಪೋರಾ ಪ್ರದೇಶದಲ್ಲಿ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ಎಲ್ಇಟಿ ಭಯೋತ್ಪಾದಕ ಆದಿಲ್ ಪರ್ರೆಯನ್ನು ಹತ್ಯೆ ಮಾಡಲಾಗಿದೆ ಎಂದು ಅವರು ಹೇಳಿದರು.
ಹತ್ಯೆಗೀಡಾದ ಭಯೋತ್ಪಾದಕ ಎಲ್ಇಟಿಗೆ ಪ್ರಮುಖನಾಗಿದ್ದು, ಅವನ ಹತ್ಯೆಯು ಭಯೋತ್ಪಾದಕ ಸಂಘಟನೆಗೆ ದೊಡ್ಡ ಹಿನ್ನಡೆ ಮತ್ತು ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸಾಗಿದೆ ಎಂದು ಕುಮಾರ್ ಬಣ್ಣಿಸಿದ್ದಾರೆ.
ಕಳೆದ 48 ಗಂಟೆಗಳಲ್ಲಿ ಕಾಶ್ಮೀರದಲ್ಲಿ ನಡೆದ ಮೂರನೇ ಎನ್ಕೌಂಟರ್ ಇದಾಗಿದೆ. ಈ ಹಿಂದೆ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ನಡೆದ ಎರಡು ಎನ್ಕೌಂಟರ್ಗಳಲ್ಲಿ ಭದ್ರತಾ ಪಡೆಗಳು 4 ಭಯೋತ್ಪಾದಕರನ್ನು ಹತ್ಯೆ ಮಾಡಿದ್ದು, ಒಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಮೂವರು ಎಲ್ಇಟಿ ಉಗ್ರರನ್ನು ಹತ್ಯೆ ಮಾಡಿದ್ದರು.
ಕೇಂದ್ರಾಡಳಿತ ಪ್ರದೇಶದಲ್ಲಿ ಇದು ಈ ವರ್ಷದ 61 ನೇ ಎನ್ಕೌಂಟರ್ ಎಂದು ಉಲ್ಲೇಖಿಸಲಾಗಿದೆ. ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ 28 ಪಾಕಿಸ್ತಾನಿ ಸೇರಿದಂತೆ 100 ಭಯೋತ್ಪಾದಕರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದ್ದಾರೆ ಮತ್ತು 47 ಸಕ್ರಿಯ ಭಯೋತ್ಪಾದಕರು ಮತ್ತು ಅವರ 185 ಸಹಚರರನ್ನು ಬಂಧಿಸಿದ್ದಾರೆ. ಈ ವರ್ಷ ಕಾಶ್ಮೀರದಲ್ಲಿ ಭಯೋತ್ಪಾದಕ ಘಟನೆಗಳಲ್ಲಿ 17 ನಾಗರಿಕರು ಮತ್ತು 16 ಭದ್ರತಾ ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.