ನವದೆಹಲಿ: ನೂಪುರ್ ಶರ್ಮಾ ಅವರ ಹೇಳಿಕೆಯನ್ನು ಖಂಡಿಸಿ ಮುಸ್ಲಿಮರು ನಡೆಸಿದ ಹಿಂಸಾತ್ಮಕ ಪ್ರತಿಭಟನೆಗೆ ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ದಿಟ್ಟ ಪ್ರತ್ಯುತ್ತರವನ್ನು ನೀಡಿದೆ.
ಈಗಾಗಲೇ ಮುನ್ನೂರಕ್ಕೂ ಅಧಿಕ ದಂಗೆಕೋರರನ್ನು ಬಂಧಿಸಲಾಗಿದೆ. ಆಸ್ತಿಪಾಸ್ತಿ ನಷ್ಟ ಮತ್ತು ದೊಂಬಿಯಲ್ಲಿ ಪಾಲ್ಗೊಂಡಿರುವ ದುಷ್ಕರ್ಮಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ.
ಅಷ್ಟೇ ಅಲ್ಲದೆ ಹಿಂಸೆಯಲ್ಲಿ ಭಾಗವಹಿಸಿದ್ದ ಮೂವರ ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್ ಬಳಸಿ ಕೆಡವಲಾಗಿದೆ. ಒಂದು ಕಟ್ಟಡನ್ನು ಪ್ರಯಾಗ್ರಾಜ್ ಮತ್ತು ಎರಡು ಕಟ್ಟಡಗಳನ್ನು ಶಹರನ್ ಪುರದಲ್ಲಿ ಕೆಡವಲಾಗಿದೆ.
ಉತ್ತರ ಪ್ರದೇಶದ ಪೊಲೀಸರು 8 ಜಿಲ್ಲೆಗಳಲ್ಲಿ 300 ಮಂದಿಯನ್ನು ಬಂಧಿಸಿದ್ದಾರೆ ಮತ್ತು 13 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶುಕ್ರವಾರ ನಡೆದ ಘಟನೆಗೆ ಶನಿವಾರವೇ ಉತ್ತರ ನೀಡುವ ಮೂಲಕ ಯೋಗಿ ಆದಿತ್ಯನಾಥ ಸರಕಾರ ದಂಧೆಕೋರರ ಹೆಡೆಮುರಿ ಕಟ್ಟುವ ಕಾರ್ಯವನ್ನು ಮಾಡಿದೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.