ನವದೆಹಲಿ: ರಾಷ್ಟ್ರೀಯ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ನಿರಂತರವಾಗಿ ವಿಕಸನಗೊಳ್ಳುತ್ತಿರುವ ಜಾಗತಿಕ ಪರಿಸ್ಥಿತಿಯಿಂದ ಹೊರಹೊಮ್ಮಬಹುದಾದ ಭವಿಷ್ಯದ ಸವಾಲುಗಳನ್ನು ಎದುರಿಸಲು ನಾಗರಿಕ ಆಡಳಿತ ಮತ್ತು ಸಶಸ್ತ್ರ ಪಡೆಗಳ ಹೆಚ್ಚಿನ ಸಮನ್ವಯಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕರೆ ನೀಡಿದ್ದಾರೆ.
ಮಸ್ಸೂರಿಯ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ (LBSNAA) ನಲ್ಲಿ 28 ನೇ ಜಂಟಿ ನಾಗರಿಕ-ಮಿಲಿಟರಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಭದ್ರತೆಯ ಪರಿಕಲ್ಪನೆಯು ವಿಸ್ತಾರವಾಗಿದೆ, ಏಕೆಂದರೆ ಅನೇಕ ಮಿಲಿಟರಿಯೇತರ ಆಯಾಮಗಳನ್ನು ಇದಕ್ಕೆ ಸೇರಿಸಲಾಗಿದೆ. ಹೈಬ್ರಿಡ್ ಬೆದರಿಕೆಗಳನ್ನು ಎದುರಿಸಲು ನಾಗರಿಕ ಆಡಳಿತ ಮತ್ತು ಸಶಸ್ತ್ರ ಪಡೆಗಳ ಸಮನ್ವಯ ಅಗತ್ಯ, ಭವಿಷ್ಯದ ಸವಾಲುಗಳಿಗೆ ಪ್ರತಿಕ್ರಿಯಿಸಲು ರಾಷ್ಟ್ರವು ಸಾಕಷ್ಟು ಸಿದ್ಧತೆಯನ್ನು ನಿರೀಕ್ಷಿಸುತ್ತದೆ ಎಂದಿದ್ದಾರೆ.
ಭಾರತವು ಶಾಂತಿಪ್ರಿಯ ರಾಷ್ಟ್ರವಾಗಿದ್ದು, ಯುದ್ಧವನ್ನು ಬಯಸುವುದಿಲ್ಲ ಎಂದು ಅವರು ಪ್ರತಿಪಾದಿಸಿದರು. “ಭಾರತ ಯಾವ ದೇಶದ ಮೇಲೂ ದಾಳಿ ಮಾಡಿಲ್ಲ, ಯಾರೊಬ್ಬರ ಒಂದು ಇಂಚು ಭೂಮಿಯನ್ನು ವಶಪಡಿಸಿಕೊಂಡಿಲ್ಲ. ಆದರೆ, ಯಾರಾದರೂ ಭಾರತದ ಮೇಲೆ ಕೆಟ್ಟ ದೃಷ್ಟಿ ಬೀರಿದರೆ ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ” ಎಂದಿದ್ದಾರೆ.
ರಾಜನಾಥ್ ಸಿಂಗ್ ಅವರು ರಷ್ಯಾ-ಉಕ್ರೇನ್ ಪರಿಸ್ಥಿತಿ ಮತ್ತು ಇತರ ರೀತಿಯ ಸಂಘರ್ಷಗಳಿಂದ ಜಗತ್ತು ಸಾಂಪ್ರದಾಯಿಕ ಯುದ್ಧವನ್ನು ಮೀರಿದ ಸವಾಲುಗಳಿಗೆ ಸಾಕ್ಷಿಯಾಗುತ್ತಿದೆ ಎಂದು ವಿವರಿಸಿದರು. ಶಾಂತಿಯ ಸಮಯದಲ್ಲಿಯೂ ಯುದ್ಧವು ಅನೇಕ ರಂಗಗಳಲ್ಲಿ ಮುಂದುವರಿಯುತ್ತಿದೆ ಎಂದು ಅವರು ಹೇಳಿದರು. ತಂತ್ರಜ್ಞಾನ, ಪೂರೈಕೆ ಮಾರ್ಗ, ಮಾಹಿತಿ, ಇಂಧನ, ವ್ಯಾಪಾರ ವ್ಯವಸ್ಥೆ, ಹಣಕಾಸು ವ್ಯವಸ್ಥೆ ಮುಂತಾದವುಗಳನ್ನು ಅಸ್ತ್ರವಾಗಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ನಮ್ಮ ವಿರುದ್ಧ ಇದು ಅಸ್ತ್ರವಾಗಿ ಬಳಕೆಯಾಗಬಹುದು ಎಂದರು. ಈ ವಿಸ್ತೃತ ವ್ಯಾಪ್ತಿಯ ಭದ್ರತಾ ಸವಾಲುಗಳನ್ನು ಎದುರಿಸಲು ಜನರ ಸಹಕಾರವನ್ನು ಕೋರಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.