ನವದೆಹಲಿ: ಜೂನ್ 30 ರಿಂದ ಪವಿತ್ರ ಅಮರನಾಥ ಯಾತ್ರೆ ಆರಂಭವಾಗುತ್ತಿದೆ ಅಮರನಾಥ ಯಾತ್ರಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಆಡಳಿತವು ತ್ವರಿತ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಈ ಬಾರಿ ಯಾತ್ರೆಗೆ ಅಧಿಸೂಚನೆ ಹೊರಡಿಸಿದ್ದು, ಅಮರನಾಥ ಯಾತ್ರಿಗಳು ಆಧಾರ್ ಕಾರ್ಡ್ ಸಂಖ್ಯೆಯನ್ನು ಸಲ್ಲಿಸಬೇಕು ಎಂದು ಸೂಚಿಸಿದೆ.
ಉತ್ತಮ ಆಡಳಿತಕ್ಕಾಗಿ ಆಧಾರ್ ದೃಢೀಕರಣ (ಸಮಾಜ ಕಲ್ಯಾಣ, ನಾವೀನ್ಯತೆ, ಜ್ಞಾನ) ನಿಯಮಗಳು 2020 ರ ನಿಯಮ 5 ರ ಪ್ರಕಾರ, ಕೇಂದ್ರ ಸರ್ಕಾರದ ಅನುಮೋದನೆಯ ಪ್ರಕಾರ, ಅಮರನಾಥ ಯಾತ್ರೆಗೆ ಹೋಗಲು ಬಯಸುವ ಯಾತ್ರಾರ್ಥಿಗಳು ಆಧಾರ್ ಕಾರ್ಡ್ ಹೊಂದಿರಬೇಕು ಅಥವಾ ಒದಗಿಸಬೇಕು ಎಂದಿದೆ.
ಅಮರನಾಥ ಯಾತ್ರೆಯ ಸಿದ್ಧತೆಗಳನ್ನು ಅಧಿಕಾರಿಗಳು ನಿಯಮತವಾಗಿ ಪರಿಶೀಲಿಸುತ್ತಿದ್ದಾರೆ. ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸುವ ಕಾರ್ಯವೂ ಭರದಿಂದ ಸಾಗುತ್ತಿದೆ.
ಗದಿತ ಅವಧಿಯೊಳಗೆ ಎಲ್ಲ ಕಾಮಗಾರಿ ಪೂರ್ಣಗೊಳಿಸಬೇಕು, ಪ್ರಯಾಣದ ಸುರಕ್ಷತೆಗಾಗಿ ಅಧಿಕಾರಿಗಳು ತಂತ್ರಜ್ಞಾನವನ್ನು ಬಳಸಬೇಕು ಎಂದು ಸೂಚನೆ ನೀಡಲಾಗಿದೆ.
ಸಾರಿಗೆ, ವಸತಿ, ನೈರ್ಮಲ್ಯದ ಅಂಶಗಳು, ವಿದ್ಯುತ್, ನೀರು, ಆರೋಗ್ಯ, ಅಂಗಡಿಗಳು, ಆಹಾರಗಳನ್ನು ಒದಗಿಸುವ ನಿಟ್ಟಿನಲ್ಲಿ ಸಿದ್ಧತೆ ಸಾಗಿದೆ.
ಇದೇ ವೇಳೆ ಅಮರನಾಥ ಯಾತ್ರೆಗೂ ಮುನ್ನ ಮತ್ತೆ ಉಗ್ರರ ದಾಳಿ ಭೀತಿ ಎದುರಾಗಿದೆ. ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಬ್ಬರು ಲಷ್ಕರ್-ಎ-ತೊಯ್ಬಾ ಉಗ್ರರನ್ನು ಹೊಡೆದುರುಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.