ನವದೆಹಲಿ: ಇತ್ತೀಚಿಗೆ ಮುಸ್ಲಿಂ ಮೂಲಭೂತವಾದಿ ಸಂಘಟನೆಗಳು ದೇಶವ್ಯಾಪಿ ನಡೆಸುತ್ತಿರುವ ಹಿಂಸಾಚಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ವಿಶ್ವ ಹಿಂದೂ ಪರಿಷತ್, ಬಜರಂದದಳ ಹೇಳಿದೆ.
ಪ್ರವಾದಿ ಮಹಮ್ಮದ್ ಅವರ ಅವಹೇಳನದ ವಿರುದ್ಧವಾಗಿ ದೇಶಾದ್ಯಂತ ಪ್ರತಿಭಟನೆ ಹೆಸರಲ್ಲಿ ಹಿಂಸಾಚಾರವನ್ನು ನಡೆಸಲಾಗುತ್ತಿದೆ. ಇದರ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ವಿಎಚ್ಪಿ ಹೇಳಿದೆ.
“ಮುಸ್ಲಿಂ ಜಿಹಾದಿ ಮೂಲಭೂತವಾದಿಗಳಿಂದ ದೇಶದಲ್ಲಿ ತೀವ್ರವಾದಿ ಕೃತ್ಯಗಳು ಹೆಚ್ಚುತ್ತಿದ್ದು, ಗುರುವಾರ ನಮ್ಮ ಕಾರ್ಯಕರ್ತರು ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಲಿದ್ದಾರೆ. ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಜ್ಞಾಪಕ ಪತ್ರವನ್ನು ರವಾನಿಸಲಿದ್ದಾರೆ” ಎಂದು ವಿಎಚ್ಪಿ ಹೇಳಿದೆ.
ಪ್ರವಾದಿ ಮಹಮ್ಮದ್ ಅವರ ಬಗ್ಗೆ ನೂಪುರ್ ಶರ್ಮ ಅವರು ನೀಡಿದ ಹೇಳಿಕೆಯನ್ನು ವಿರೋಧಿಸಿ ಕಳೆದ ಶುಕ್ರವಾರ ಪ್ರಾರ್ಥನೆಯ ಬಳಿಕ ದೇಶಾದ್ಯಂತ ಕಲ್ಲುತೂರಾಟದ ಘಟನೆಗಳು ನಡೆದಿದ್ದವು.
ಇದನ್ನು ವಿರೋಧಿಸಿ ಮಂಗಳವಾರ ರಾತ್ರಿ 8ಗಂಟೆಗೆ ದೇವಾಲಯಗಳಲ್ಲಿ ಜಮಾಯಿಸಿ ಸಾಮೂಹಿಕ ಹನುಮಾನ್ ಚಾಲಿಸ ಪಠಿಸಬೇಕು ಎಂದು ವಿಎಚ್ಪಿ ದೆಹಲಿ ಘಟಕ ನಾಗರಿಕರಿಗೆ ಕರೆ ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.