ನವದೆಹಲಿ: ಜೂನ್-20ರ ಸೋಮವಾರ ಸಂಜೆ ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಂಗುವ ಹೋಟೆಲ್, ಸಂಚರಿಸುವ ರಸ್ತೆಗಳಲ್ಲಿ ಕೈಗೊಳ್ಳಬೇಕಿರುವ ಭದ್ರತೆ, ರಸ್ತೆಗಳ ಸ್ಥಿತಿಗತಿಗಳನ್ನು ಇಂದು ಸಂಸದ ಪ್ರತಾಪ್ ಸಿಂಹ ಮತ್ತು ಸಚಿವರ ಪರಿಶೀಲನೆ ನಡೆಸಿದರು.
ಪಾದಚಾರಿ ಮಾರ್ಗಗಳ ದುರಸ್ತಿ, ರಸ್ತೆಗಳ ಡಾಂಬರೀಕರಣಕ್ಕೆ 15 ಕೋಟಿ ರೂ. ವೆಚ್ಚವಾಗಲಿದೆ ಎಂದು ಪಾಲಿಕೆ ಅಂದಾಜು ಮಾಡಿದ್ದು, 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. 15 ರಸ್ತೆಗಳ ಡಾಂಬರೀಕರಣ, ಪಾದಚಾರಿ ಮಾರ್ಗ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಮಂಗಳವಾರ ಮಳೆಯಾದ ಹಿನ್ನೆಲೆಯಲ್ಲಿ ಎರಡು ರಸ್ತೆಗಳ ಕಾಮಗಾರಿ ಪೂರ್ಣಗೊಂಡಿಲ್ಲ. ಮಳೆ ನಿಂತ ಕೂಡಲೇ ಆ ರಸ್ತೆಗಳ ಕಾಮಗಾರಿ ಮುಕ್ತಾಯವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದರು.
ಬೀದಿದೀಪಗಳ ವ್ಯವಸ್ಥೆ, ದಸರಾ ವೇಳೆ ದೀಪಾಲಂಕರ ಮಾಡುವಂತೆ ಪ್ರಧಾನಮಂತ್ರಿಗಳು ಭೇಟಿ ನೀಡುವ ಅರಮನೆ, ಅವರು ಸಂಚರಿಸುವ ರಸ್ತೆಗಳಲ್ಲಿ ದೀಪಾಲಂಕಾರ ಮಾಡಲು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಾಹನಗಳ ಪಾರ್ಕಿಂಗ್ ಸ್ಥಳಗಳನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಗುರುತಿಸಲಿದ್ದಾರೆ.
ಕಳೆದ ಮೂರು ವರ್ಷಗಳಿಂದ ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ. ಎಷ್ಟು ಜನರೊಂದಿಗೆ ಸಂವಾದ ನಡೆಸಬೇಕು ಎಂಬುದರ ಬಗ್ಗೆ ಕೇಂದ್ರ ಸರ್ಕಾರ ನೀಡುವ ನಿರ್ದೇಶನದಂತೆ ಆಯೋಜಿಸಲಾಗಿದೆ.
ಸಂವಾದ ಕಾರ್ಯಕ್ರಮ ವೀಕ್ಷಿಸಲು 60 ಸಾವಿರ ಜನರಿಗೆ ವ್ಯವಸ್ಥೆ ಮಾಡಲಾಗಿದೆ. ಒಂದು ಕಡೆ 30 ಸಾವಿರ, ಎರಡು ಕಡೆಗಳಲ್ಲಿ ತಲಾ 15 ಸಾವಿರ ಜನರು ಕಾರ್ಯಕ್ರಮ ವೀಕ್ಷಿಸಬಹುದಾಗಿದೆ.
ಪ್ರಧಾನಮಂತ್ರಿ ಜೊತೆ ಯಾರು ವೇದಿಕೆ ಹಂಚಿಕೊಳ್ಳಬೇಕು ಎಂಬುದರ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಲಿದ್ದು ಅದರಂತೆ ಪಾಲನೆ ಮಾಡಲಾಗುವುದು. ಸುತ್ತೂರು ಮಠ, ಚಾಮುಂಡಿ ಬೆಟ್ಟ ವೀಕ್ಷಣೆ ಮಾಡುವಂತೆ ಪ್ರಧಾನಮಂತ್ರಿಗಳಿಗೆ ಮನವಿ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.