ನವದೆಹಲಿ: ಸಶಸ್ತ್ರ ಪಡೆಗಳಿಗೆ 4 ವರ್ಷಗಳ ಕಾಲ ಸೇವೆ ಸಲ್ಲಿಸಿ ಹೊರಬರುವ ʼಅಗ್ನಿವೀರʼರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಆದ್ಯತೆಯನ್ನು ನೀಡಲು ಹರಿಯಾಣ ಸರ್ಕಾರ ಮುಂದಾಗಿದೆ. ಈ ಬಗ್ಗೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಇಂದು ಘೋಷಣೆ ಮಾಡಿದ್ದಾರೆ.
ಅಗ್ನಿವೀರರಿಗೆ ಆದ್ಯತೆ ನೀಡುವ ಯೋಜನೆಗಳನ್ನು ಇತರ ಉದ್ಯೋಗಗಳಲ್ಲಿಯೂ ತರಲಾಗುವುದು ಎಂದು ಖಟ್ಟರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
‘ಅಗ್ನಿವೀರರಿಗೆ ಉತ್ತಮ ಸಂಭಾವನೆ ನೀಡಲಾಗುವುದು, ಮೊದಲ ವರ್ಷದಲ್ಲಿ 4.76 ಲಕ್ಷ ರೂ.ಗಳನ್ನು ನೀಡಲಾಗುವುದು, ಅದು ನಂತರ 6.96 ಲಕ್ಷ ರೂಪಾಯಿಗೆ ಏರಿಕೆಯಾಗಲಿದೆ ಎಂದು ಸಿಎಂ ಹೇಳಿದ್ದಾರೆ.
“ಅವರು 4 ವರ್ಷಗಳ ನಂತರ ಸೇವೆಯಿಂದ ಹಿಂತಿರುಗಿದಾಗ, ಅವರಿಗೆ ಸುಮಾರು 12 ಲಕ್ಷ ರೂಪಾಯಿಗಳನ್ನು ನೀಡಲಾಗುತ್ತದೆ. ಅವರಿಗೆ ಇತರ ಪ್ರಯೋಜನಗಳು, ಭತ್ಯೆಗಳು ಮತ್ತು ವಿಮೆಗಳನ್ನು ನೀಡಲಾಗುವುದು” ಎಂದು ಸಿಎಂ ಖಟ್ಟರ್ ಹೇಳಿದ್ದಾರೆ.
ಸಶಸ್ತ್ರ ಪಡೆಗಳಲ್ಲಿ ಯುವಕರ ನೇಮಕಾತಿಗಾಗಿ ಕೇಂದ್ರ ಸರ್ಕಾರವು ‘ಅಗ್ನಿಪಥ್’ ಯೋಜನೆಯನ್ನು ಘೋಷಿಸಿದ ಬಳಿಕ ಖಟ್ಟರ್ ಅವರು ಈ ಹೇಳಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.