ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಹಿಮಾಚಲ ಪ್ರದೇಶ ಪ್ರವಾಸವನ್ನು ಇಂದು ಧರ್ಮಶಾಲಾ ಭೇಟಿಯೊಂದಿಗೆ ಪ್ರಾರಂಭಿಸಲಿದ್ದಾರೆ. ಅಲ್ಲಿ ಅವರು ಎರಡು ದಿನಗಳ ಅಖಿಲ ಭಾರತ ಮುಖ್ಯ ಕಾರ್ಯದರ್ಶಿಗಳ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.
ಧರ್ಮಶಾಲಾದ ಪೊಲೀಸ್ ಸ್ಟೇಡಿಯಂನಲ್ಲಿ ವಿಶೇಷವಾಗಿ ರಚಿಸಲಾದ ಹೆಲಿಪ್ಯಾಡ್ಗೆ ಪ್ರಧಾನಿ ಆಗಮಿಸಲಿದ್ದು, ಅಲ್ಲಿ ರಾಜ್ಯದ ರಾಜ್ಯಪಾಲರು, ಸಿಎಂ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರನ್ನು ಸ್ವಾಗತಿಸಲಿದ್ದಾರೆ. ಶುಕ್ರವಾರ ಸಂಜೆ ಮೋದಿ ದೆಹಲಿಗೆ ವಾಪಾಸ್ ತೆರಳಲಿದ್ದಾರೆ.
ಪ್ರಧಾನಿ ಭೇಟಿಗೂ ಮುನ್ನ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ಬುಧವಾರ ಭೇಟಿಯ ಸಿದ್ಧತೆಗಳನ್ನು ಪರಿಶೀಲಿಸಿದರು. ಮುಖ್ಯಮಂತ್ರಿಗಳು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಶಿಷ್ಟಾಚಾರದ ಪ್ರಕಾರ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಜೈ ರಾಮ್ ಅವರು ರೋಡ್ಶೋ ಸಿದ್ಧತೆಗಳನ್ನು ಕೂಡ ಪರಿಶೀಲಿಸಿದ್ದಾರೆ. ಪಥಸಂಚಲನದ ಸಿದ್ಧತೆಯನ್ನೂ ಅವರು ಪರಿಶೀಲಿಸಿದರು. “ರೋಡ್ಶೋ ಸಮಯದಲ್ಲಿ, ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸಿದ ವಿವಿಧ ಸಾಂಸ್ಕೃತಿಕ ತಂಡಗಳು ತಮ್ಮ ಸಂಗೀತ ವಾದ್ಯಗಳೊಂದಿಗೆ ಪ್ರಧಾನಿಯನ್ನು ಸ್ವಾಗತಿಸುತ್ತವೆ” ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಅಖಿಲ ಭಾರತ ಮುಖ್ಯ ಕಾರ್ಯದರ್ಶಿಗಳ ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.