ನವದೆಹಲಿ: ದಾಳಿಯಲ್ಲಿ ಭಾಗವಹಿಸಿ ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡುತ್ತಿರುವ ದುಷ್ಕರ್ಮಿಗಳ ವಿರುದ್ಧ ಯೋಗಿ ಆದಿತ್ಯನಾಥ್ ಅವರು ಬುಲ್ಡೋಜರ್ ಕ್ರಮ ಜರುಗಿಸುತ್ತಿದ್ದಾರೆ. ಗಲಭೇಕೋರರ ಅಕ್ರಮ ಕಟ್ಟಡಗಳ ಮೇಲೆ ಬುಲ್ಡೋಜರ್ ಹತ್ತಿಸಿ ನೆಲಸಮ ಮಾಡುತ್ತಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಇಂದು ಆದೇಶ ನೀಡಿರುವ ಸುಪ್ರೀಂಕೋರ್ಟ್, ಕಟ್ಟಡಗಳ ಧ್ವಂಸ ಕಾರ್ಯಕ್ಕೆ ತಡೆ ನೀಡಲು ಸಾಧ್ಯವಿಲ್ಲ, ಆದರೆ ಕ್ರಮ ಕಾನೂನಿನ ಪ್ರಕಾರವೇ ಇರಬೇಕು ಎಂದು ಉತ್ತರಪ್ರದೇಶ ಸರ್ಕಾರಕ್ಕೆ ಹೇಳಿದೆ.
“ಕ್ರಮ ಜರುಗಿಸುವಾಗ ಕಾನೂನಿನ ಸರಿಯಾದ ಪ್ರಕ್ರಿಯೆಯನ್ನುಅನುಸರಿಸಬೇಕು ಎಂದು ಸುಪ್ರೀಂ ಒತ್ತಿಹೇಳಿದೆ ಮತ್ತು ಈ ನಿಟ್ಟಿನಲ್ಲಿ ಉತ್ತರ ಪ್ರದೇಶ ಸರ್ಕಾರದಿಂದ ಪ್ರತಿಕ್ರಿಯೆಯನ್ನು ಕೇಳಿದೆ.
“ಎಲ್ಲವೂ ನ್ಯಾಯಯುತವಾಗಿರಬೇಕು ಮತ್ತು ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಸರಿಯಾದ ಕಾರ್ಯವಿಧಾನವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು” ಎಂದಿದೆ.
ಕಳೆದ ವಾರದ ಹಿಂಸಾಚಾರದ ಬಳಿಕ ಆರೋಪಿಗಳ ಮನೆಗಳನ್ನು ಅಕ್ರಮವಾಗಿ ಕೆಡವಲಾಗಿದೆ ಎಂದು ಆರೋಪಿಸಿ ಹಲವಾರು ಮನವಿಗಳನ್ನು ಸಲ್ಲಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ದೇಶದ ಅತ್ಯುನ್ನತ ನ್ಯಾಯಾಲಯವು ಯುಪಿ ಸರ್ಕಾರದ ಅಧಿಕಾರಿಗಳಿಂದ ಪ್ರತಿಕ್ರಿಯೆಯನ್ನು ಕೇಳಿದೆ.
ದೇಶದಲ್ಲಿ ಕಾನೂನಿನ ಆಡಳಿತವಿದೆ ಎಂಬ ಭಾವನೆ ನಾಗರಿಕರಲ್ಲಿ ಇರಬೇಕು ಎಂದು ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ವಿಕ್ರಮ್ ನಾಥ್ ಅವರ ರಜಾಕಾಲದ ಪೀಠ ಹೇಳಿದೆ.
ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಕಾನ್ಪುರ ಮತ್ತು ಪ್ರಯಾಗ್ರಾಜ್ ನಾಗರಿಕ ಅಧಿಕಾರಿಗಳನ್ನು ಪ್ರತಿನಿಧಿಸುವ ಹಿರಿಯ ವಕೀಲ ಹರೀಶ್ ಸಾಳ್ವೆ, ಕಾನೂನು ಪ್ರಕ್ರಿಯೆಯನ್ನು ಅನುಸರಿಸಲಾಗಿದೆ ಮತ್ತು 2020 ರ ಆಗಸ್ಟ್ನಲ್ಲಿ ನೆಲಸಮಗೊಳಿಸುವ ಬಗ್ಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.