ನವದೆಹಲಿ: ‘ಅಗ್ನಿಪಥ’ ಯೋಜನೆಯಡಿಯಲ್ಲಿ ಸೇನೆಯ ರೆಜಿಮೆಂಟಲ್ ವ್ಯವಸ್ಥೆಗೆ ಯಾವುದೇ ಬದಲಾವಣೆಯನ್ನು ಮಾಡಲಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಯೋಜನೆಯಡಿ ಮೊದಲ ವರ್ಷದಲ್ಲಿ ನೇಮಕಗೊಳ್ಳುವ ಸಿಬ್ಬಂದಿಗಳ ಸಂಖ್ಯೆಯು ಸಶಸ್ತ್ರ ಪಡೆಗಳಲ್ಲಿನ ಕೇವಲ ಮೂರು ಪ್ರತಿಶತವನ್ನು ಮಾತ್ರ ಒಳಗೊಳ್ಳುತ್ತದೆ ಎಂದಿದೆ.
ದೇಶದ ಹಲವು ಭಾಗಗಳಲ್ಲಿ ಹೊಸ ಯೋಜನೆಯ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಸಂದರ್ಭದಲ್ಲಿ ಈ ಹೇಳಿಕೆ ಹೊರಬಿದ್ದಿದೆ.
ಈ ಯೋಜನೆಯು ಯುವಕರಿಗೆ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಮತ್ತು ಅದರ ಅಡಿಯಲ್ಲಿ ಸಿಬ್ಬಂದಿಗಳ ನೇಮಕಾತಿಯ ಬಳಿಕ ಸಶಸ್ತ್ರ ಪಡೆಗಳಲ್ಲಿ ಪ್ರಸ್ತುತ ನೇಮಕಾತಿ ಮೂರು ಪಟ್ಟು ಹೆಚ್ಚಾಗಿರುತ್ತದೆ ಎಂದಿದೆ.
ದಶಕಗಳಷ್ಟು ಹಳೆಯದಾದ ಆಯ್ಕೆ ಪ್ರಕ್ರಿಯೆಯನ್ನು ಪ್ರಮುಖವಾಗಿ ಕೂಲಂಕಷ ಮಾಡಿ, ನಾಲ್ಕು ವರ್ಷಗಳ ಅಲ್ಪಾವಧಿಯ ಒಪ್ಪಂದದ ಆಧಾರದ ಮೇಲೆ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಸೈನಿಕರ ನೇಮಕಾತಿಗಾಗಿ ಸರ್ಕಾರವು ಮಂಗಳವಾರ ಅಗ್ನಿಪಥ ಯೋಜನೆಯನ್ನು ಅನಾವರಣಗೊಳಿಸಿದೆ.
ಯೋಜನೆಯಡಿಯಲ್ಲಿ, 17.5ರಿಂದ 21 ವರ್ಷ ವಯಸ್ಸಿನ ಯುವಕರು ಮೂರು ಸೇವೆಗಳಿಗೆ ಸೇರ್ಪಡೆಗೊಳ್ಳುತ್ತಾರೆ. ನಾಲ್ಕು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ, ನಿಯಮಿತ ಸೇವೆಗಾಗಿ 25 ಪ್ರತಿಶತದಷ್ಟು ಅಗ್ನಿವೀರರನ್ನು ಉಳಿಸಿಕೊಳ್ಳಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.