ನವದೆಹಲಿ: ‘ಆಜಾದಿ ಕಾ ಅಮೃತ್ ಮಹೋತ್ಸವ’ ಸ್ಮರಣಾರ್ಥ ದೇಶದ 75 ಬೀಚ್ಗಳನ್ನು ಸ್ವಚ್ಛಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಈ ವರ್ಷದ ಜುಲೈ 3 ರಿಂದ ಸೆಪ್ಟೆಂಬರ್ 17 ರವರೆಗೆ 75 ದಿನಗಳ ಕಾಲ ದೇಶದಲ್ಲಿ ಕರಾವಳಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ. ಕರಾವಳಿಯಿಂದ 1,500 ಟನ್ಗಳಷ್ಟು ಕಸವನ್ನು ತೆಗೆದುಹಾಕುವ ಗುರಿಯನ್ನು ಈ ಅಭಿಯಾನ ಹೊಂದಿದೆ.
ನವದೆಹಲಿಯಲ್ಲಿ ನಡೆದ ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ-2022 ರ ಪೂರ್ವವೀಕ್ಷಣೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
ಈ ವಿಶಿಷ್ಟ ಅಭಿಯಾನದ ಕುರಿತು ಮಾತನಾಡಿದ ಡಾ. ಸಿಂಗ್, ಇದು ಮೊದಲ ರೀತಿಯ ಮತ್ತು ದೀರ್ಘಾವಧಿಯ ಕರಾವಳಿ ಸ್ವಚ್ಛತಾ ಅಭಿಯಾನವಾಗಿದ್ದು, ಇದರಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದಿದ್ದಾರೆ.
ದೇಶದ ಏಳಿಗೆಗಾಗಿ ಸ್ವಚ್ಛ ಸಾಗರ, ಸುರಕ್ಷಿತ ಸಾಗರ ಎಂಬ ಸಂದೇಶ ಸಾರಲು ಜನರ ಸಹಭಾಗಿತ್ವ ಅಗತ್ಯ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.