ನವದೆಹಲಿ: ಅಗ್ನಿಪಥ್ ಯೋಜನೆಯ ಮೂಲಕ ಸೇನೆಗೆ ನೇಮಕಾತಿ ಶೀಘ್ರವೇ ಆರಂಭವಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಹೇಳಿದ್ದಾರೆ. ಆಕಾಂಕ್ಷಿಗಳು ತಮ್ಮ ಸಿದ್ಧತೆಗಳನ್ನು ಆರಂಭಿಸುವಂತೆ ಅವರು ಸಲಹೆ ನೀಡಿದ್ದಾರೆ.
ಈ ಯೋಜನೆಯನ್ನು ರಾಷ್ಟ್ರದ ರಕ್ಷಣಾ ವ್ಯವಸ್ಥೆಗೆ ಸೇರಲು ಮತ್ತು ದೇಶಕ್ಕೆ ಸೇವೆ ಸಲ್ಲಿಸಲು ‘ಸುವರ್ಣ ಅವಕಾಶ’ ಎಂದು ಕರೆದ ಸಿಂಗ್, ಯೋಜನೆಯ ಮೂಲಕ ನೇಮಕಗೊಳ್ಳಲು ಮೊದಲ ಬ್ಯಾಚ್ಗೆ ವಯೋಮಿತಿ ವಿನಾಯಿತಿಯನ್ನು ಅನುಮತಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದರು.
ಬಿಹಾರದಲ್ಲಿ ಪ್ರಾರಂಭವಾದ ಅಗ್ನಿಪಥ್ ಯೋಜನೆ ವಿರುದ್ಧದ ಪ್ರತಿಭಟನೆಗಳ ನಡುವೆ ರಕ್ಷಣಾ ಸಚಿವರ ಹೇಳಿಕೆ ಬಂದಿದೆ ಮತ್ತು ಹಲವಾರು ರಾಜ್ಯಗಳಿಗೆ ಈ ಪ್ರತಿಭಟನೆ ಹರಡಿದೆ. ರಾಷ್ಟ್ರ ರಾಜಧಾನಿ ಸೇರಿದಂತೆ ಏಳು ರಾಜ್ಯಗಳಲ್ಲಿ ಅಗ್ನಿಪಥ್ ವಿರುದ್ಧ ಮೂರನೇ ದಿನವೂ ಪ್ರತಿಭಟನೆ ಮುಂದುವರೆದಿದೆ.
“ಅಗ್ನಿಪಥ್ ಯುವಜನರಿಗೆ ರಕ್ಷಣಾ ವ್ಯವಸ್ಥೆಗೆ ಸೇರಲು ಮತ್ತು ದೇಶಕ್ಕೆ ಸೇವೆ ಸಲ್ಲಿಸಲು ಸುವರ್ಣಾವಕಾಶವಾಗಿದೆ. ಕಳೆದ ಎರಡು ವರ್ಷಗಳಿಂದ ನೇಮಕಾತಿ ಸ್ಥಗಿ. ಗೊಂಡಿದ್ದರಿಂದ ಹಲವರು ಸೇನೆಗೆ ಸೇರುವ ಅವಕಾಶದಿಂದ ವಂಚಿತರಾಗಿದ್ದಾರೆ” ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.
“ಯುವಜನರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನ ಮಂತ್ರಿ ಅವರ ಸೂಚನೆಯ ಮೇರೆಗೆ, ಸರ್ಕಾರವು ಈ ಬಾರಿ ಅಗ್ನಿವೀರರ ನೇಮಕಾತಿಯ ವಯೋಮಿತಿಯನ್ನು 21 ವರ್ಷದಿಂದ 23 ವರ್ಷಗಳಿಗೆ ಹೆಚ್ಚಿಸಿದೆ. ಈ ಒಂದು ಬಾರಿ ಸಡಿಲಿಕೆ ನೀಡಲಾಗಿದೆ. ಇದರಿಂದ ಬಹಳಷ್ಟು ಯುವಕರು ಅಗ್ನಿವೀರರಾಗಲು ಅರ್ಹರಾಗುತ್ತಾರೆ” ಎಂದು ರಕ್ಷಣಾ ಸಚಿವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
“ಯುವಕರ ಭವಿಷ್ಯದ ಬಗ್ಗೆ ಕಾಳಜಿ ಮತ್ತು ಸಂವೇದನಾಶೀಲತೆಗಾಗಿ ಪ್ರಧಾನಮಂತ್ರಿ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಸೇನೆಗೆ ನೇಮಕಾತಿ ಪ್ರಕ್ರಿಯೆ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ ಅದಕ್ಕಾಗಿ ತಮ್ಮ ತಯಾರಿಯನ್ನು ಆರಂಭಿಸಬೇಕು ಎಂದು ನಾನು ಯುವಕರಲ್ಲಿ ಮನವಿ ಮಾಡುತ್ತೇನೆ” ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
केंद्र सरकार द्वारा घोषित की गई ‘अग्निपथ योजना’ भारत के युवाओं को देश की रक्षा व्यवस्था से जुड़ने और देश सेवा करने का सुनहरा अवसर है।
पिछले दो वर्षों से सेना में भर्ती की प्रक्रिया नहीं होने के कारण बहुत से युवाओं को सेना में भर्ती होने का अवसर नहीं मिल सका था। 1/3
— Rajnath Singh (@rajnathsingh) June 17, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.