ನವದೆಹಲಿ: ಸುಮಾರು ಎರಡು ದಶಕಗಳ ಹಿಂದಿನ ಪ್ರಸ್ತಾವನೆಯನ್ನು ಚುನಾವಣಾ ಆಯೋಗ ಮತ್ತೆ ಮುನ್ನಲೆಗೆ ತಂದಿದ್ದು, ಒಂದಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸುವುದನ್ನು ತಡೆಯುವ ಕಾನೂನಿಗೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಒತ್ತಾಯ ಮಾಡಿದೆ.
ಒಂದು ವೇಳೆ ತಿದ್ದುಪಡಿ ಮಾಡಲಾಗದಿದ್ದರೆ, ಒಂದಕ್ಕಿಂತ ಹೆಚ್ಚು ಸ್ಥಾನದಲ್ಲಿ ಸ್ಪರ್ಧಿಸಿ ವಿಜಯದ ಬಳಿಕ ಒಂದು ಸ್ಥಾನವನ್ನು ತೊರೆದು ಅನಿವಾರ್ಯವಾಗಿ ಉಪ ಚುನಾವಣೆ ನಡೆಸುವಂತೆ ಮಾಡುವವರ ವಿರುದ್ಧ ಭಾರೀ ದಂಡವನ್ನು ವಿಧಿಸಬೇಕು ಎಂದು ಹೇಳಿದೆ.
ಕಾನೂನು ಸಚಿವಾಲಯದಲ್ಲಿ ಶಾಸಕಾಂಗ ಕಾರ್ಯದರ್ಶಿಯೊಂದಿಗಿನ ಇತ್ತೀಚಿನ ಸಂವಾದದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, 2004 ರಲ್ಲಿ ಮೊದಲ ಬಾರಿಗೆ ಪ್ರಸ್ತಾಪಿಸಲಾದ ಈ ಸುಧಾರಣೆಯನ್ನು ಮಾಡುವಂತೆ ಕೇಂದ್ರವನ್ನು ಒತ್ತಾಯ ಮಾಡಿದರು. ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿಭಾಯಿಸಲು ಶಾಸಕಾಂಗ ಇಲಾಖೆಯು ಸರ್ಕಾರದ ನೋಡಲ್ ಏಜೆನ್ಸಿಯಾಗಿದೆ.
ಇಂದಿನ ಚುನಾವಣಾ ಕಾನೂನಿನಂತೆ, ಅಭ್ಯರ್ಥಿಯು ಸಾರ್ವತ್ರಿಕ ಚುನಾವಣೆ ಅಥವಾ ಉಪ-ಚುನಾವಣೆ ಅಥವಾ ದ್ವೈವಾರ್ಷಿಕ ಚುನಾವಣೆಗಳಲ್ಲಿ ಎರಡು ವಿಭಿನ್ನ ಕ್ಷೇತ್ರಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿಸಲಾಗಿದೆ. ಒಬ್ಬ ವ್ಯಕ್ತಿಯು ಒಂದಕ್ಕಿಂತ ಹೆಚ್ಚು ಸ್ಥಾನಗಳಿಂದ ಚುನಾಯಿತರಾದರೆ, ಆ ವ್ಯಕ್ತಿಯು ತಾನು ಗೆದ್ದ ಸ್ಥಾನಗಳಲ್ಲಿ ಒಂದನ್ನು ಮಾತ್ರ ಇಟ್ಟುಕೊಂಡು ಮತ್ತೊಂದನ್ನು ಬಿಡಬೇಕು.
ಒಬ್ಬ ವ್ಯಕ್ತಿ ಒಂದೇ ಬಾರಿಗೆ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಸ್ಪರ್ಧಿಸುವಂತಿಲ್ಲ ಎಂದು 2004 ರಲ್ಲಿ ಆರ್ಪಿ ಕಾಯಿದೆಯಲ್ಲಿನ ಕೆಲವು ಸೆಕ್ಷನ್ಗಳಿಗೆ ತಿದ್ದುಪಡಿಯನ್ನು ಚುನಾವಣಾ ಸಮಿತಿಯು ಪ್ರಸ್ತಾಪಿಸಿತು. ಆದರೆ ಪ್ರಸ್ತಾಪವನ್ನು ಇದುವರೆಗೆ ಅಂಗೀಕರಿಸಲಾಗಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.