ನವದೆಹಲಿ: ಕೇಂದ್ರದ ಹೊಸ ಸೇನಾ ನೇಮಕಾತಿ ಯೋಜನೆ ‘ಅಗ್ನಿಪಥ್’ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಮಹೀಂದ್ರ ಗ್ರೂಪ್ ಮುಖ್ಯಸ್ಥ ಆನಂದ್ ಮಹೀಂದ್ರ ಅವರು ‘ಅಗ್ನಿಪಥ್’ ಮೂಲಕ ತರಬೇತಿ ಪಡೆದ ಅಗ್ನಿವೀರರಿಗೆ ತಮ್ಮ ಸಂಸ್ಥೆಯಲ್ಲಿ ಉದ್ಯೋಗಾವಕಾಶ ಮಾಡಿಕೊಡುವ ಘೋಷಣೆ ಮಾಡಿದ್ದಾರೆ.
ಸೋಮವಾರ ಈ ಬಗ್ಗೆ ಟ್ವೀಟ್ ಮಾಡಿದ ಆನಂದ್ ಮಹೀಂದ್ರ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಬೇಸರಗೊಂಡಿದ್ದೇನೆ ಎಂದಿದ್ದಾರೆ.
“ಅಗ್ನಿಪಥ್ ಯೋಜನೆ ಬಗ್ಗೆ ನಡೆಯುತ್ತಿರುವ ಹಿಂಸಾಚಾರದಿಂದ ಬೇಸರವಾಗಿದೆ. ಕಳೆದ ವರ್ಷ ಈ ಯೋಜನೆಯನ್ನು ಪ್ರಸ್ತಾಪಿಸಿದಾಗಲೂ ನಾನು ಒಂದು ಮಾತು ಹೇಳಿದ್ದೆ, ಈಗ ಅದನ್ನು ಪುನರಾವರ್ತಿಸುತ್ತೇನೆ, ಅಗ್ನಿಪಥ ಶಿಸ್ತು ಮತ್ತು ಕೌಶಲ್ಯಗಳನ್ನು ನೀಡುತ್ತದೆ. ಅತ್ಯುತ್ತಮ ಉದ್ಯೋಗವಕಾಶ ನೀಡುತ್ತದೆ. ಅಂತಹ ತರಬೇತಿ ಪಡೆದ, ಸಮರ್ಥ ಯುವಕರನ್ನು ನೇಮಿಸಿಕೊಳ್ಳುವ ಅವಕಾಶವನ್ನು ಮಹೀಂದ್ರಾ ಗ್ರೂಪ್ ಸ್ವಾಗತಿಸುತ್ತದೆ” ಎಂದಿದ್ದಾರೆ.
ಕಾರ್ಪೊರೇಟ್ ವಲಯದಲ್ಲಿ ಅಗ್ನಿವೀರ್ಗಳ ಉದ್ಯೋಗಕ್ಕೆ ಹೆಚ್ಚಿನ ಸಾಮರ್ಥ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಅಗ್ನಿವೀರರು ನಾಯಕತ್ವ, ಟೀಮ್ ವರ್ಕ್ ಮತ್ತು ದೈಹಿಕ ತರಬೇತಿಯಂತಹ ಗುಣಗಳನ್ನು ಹೊಂದಿದ್ದಾರೆ, ಅಗ್ನಿವೀರ್ಗಳು ಉದ್ಯಮಕ್ಕೆ ಮಾರುಕಟ್ಟೆಗೆ ಸಿದ್ಧವಾದ ವೃತ್ತಿಪರ ಪರಿಹಾರಗಳನ್ನು ಒದಗಿಸುತ್ತಾರೆ ಎಂದಿದ್ದಾರೆ.
Saddened by the violence around the #Agneepath program. When the scheme was mooted last year I stated-& I repeat-the discipline & skills Agniveers gain will make them eminently employable. The Mahindra Group welcomes the opportunity to recruit such trained, capable young people
— anand mahindra (@anandmahindra) June 20, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.