ನವದೆಹಲಿ: ಡಿಜಿಟಲ್ ಇಂಡಿಯಾ ಕಾರ್ಯಕ್ರಮವು ದೇಶದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತಂದಿದೆ ಮತ್ತು ಸೈಬರ್ ಭದ್ರತೆ ಇಲ್ಲದೆ ಭಾರತದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ದೆಹಲಿಯಲ್ಲಿ ಇಂದು ನಡೆದ ಸೈಬರ್ ಸುರಕ್ಷತೆ ಮತ್ತು ರಾಷ್ಟ್ರೀಯ ಭದ್ರತೆ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಶಾ, “ಪ್ರತಿಯೊಬ್ಬ ಭಾರತೀಯರು ತಂತ್ರಜ್ಞಾನ ಮತ್ತು ಇಂಟರ್ನೆಟ್ ಮೂಲಕ ಸಬಲೀಕರಣಗೊಳ್ಳಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಾಗಿದೆ. ಡಿಜಿಟಲ್ ಇಂಡಿಯಾ ಕಾರ್ಯಕ್ರಮದಿಂದ ನಮ್ಮ ಜೀವನದಲ್ಲಿ ಸಬಲೀಕರಣ ಮತ್ತು ಸಕಾರಾತ್ಮಕ ಬದಲಾವಣೆಗಳಾಗಿವೆ” ಎಂದಿದ್ದಾರೆ.
“ರಾಷ್ಟ್ರದ ಅಭಿವೃದ್ಧಿಗಾಗಿ ಸೈಬರ್-ಸುರಕ್ಷಿತ ಭಾರತವನ್ನು ನಿರ್ಮಿಸುವುದು ಎಷ್ಟು ಮುಖ್ಯ ಎಂದು ನಮಗೆಲ್ಲರಿಗೂ ತಿಳಿದಿದೆ. ಇಂದಿನ ಯುಗದಲ್ಲಿ, ಸೈಬರ್ ಭದ್ರತೆ ಇಲ್ಲದೆ ಭಾರತದ ಅಭಿವೃದ್ಧಿ ಸಾಧ್ಯವಿಲ್ಲ” ಎಂದು ಶಾ ಹೇಳಿದ್ದಾರೆ.
“ಪ್ರಧಾನಿಯವರ ಉಪಕ್ರಮದೊಂದಿಗೆ, ಭಾರತವು ಎಲ್ಲಾ ಕ್ಷೇತ್ರಗಳಲ್ಲಿ ಮುಂದುವರಿಯುತ್ತಿದೆ ಮತ್ತು ತಂತ್ರಜ್ಞಾನದ ಬಳಕೆಯನ್ನು ಎಲ್ಲಾ ಹಂತಗಳಿಗೆ ಕೊಂಡೊಯ್ಯಲಾಗಿದೆ. ಆದರೆ ಸೈಬರ್ ಭದ್ರತೆಯನ್ನು ಖಚಿತಪಡಿಸಿಕೊಳ್ಳದಿದ್ದರೆ, ಈ ಸಾಮರ್ಥ್ಯವು ನಮಗೆ ದೊಡ್ಡ ಸವಾಲಾಗಬಹುದು” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.