ಬೆಂಗಳೂರು: ಕರ್ನಾಟಕದ ಡಬಲ್ ಎಂಜಿನ್ ಸರ್ಕಾರ ವೇಗದ ಅಭಿವೃದ್ಧಿಯ ಭರವಸೆಯನ್ನು ಜನರಿಗೆ ನೀಡಿದೆ, ಇಂದು 27000 ಕೋಟಿ ರೂಪಾಯಿಯ ಯೋಜನೆಗಳನ್ನು ಲೋಕರ್ಪಣೆಗೊಳಿಸಿದ್ದು ಮತ್ತು ಶಂಕು ಸ್ಥಾಪನೆ ಮಾಡಲಾಗಿರುವುದು ಇದಕ್ಕೆ ಸಾಕ್ಷಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನಗರದ ಕೊಮ್ಮಘಟ್ಟದಲ್ಲಿ 33 ಸಾವಿರ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರನ್ನು ದೇಶದ ಯುವಕರ ಕನಸಿನ ನಗರಿ ಎಂದು ಬಣ್ಣಿಸಿದ್ದಾರೆ.
“ಇಂದು ಕರ್ನಾಟಕದಲ್ಲಿ 5 ರಾಷ್ಟ್ರೀಯ ಹೆದ್ದಾರಿ ಯೋಜನೆ, ಏಳು ರೈಲ್ವೆ ಯೋಜನೆಗಳ ಶಿಲಾನ್ಯಾಸ ನೆರವೇರಿದೆ. ಕೊಂಕನ್ ರೈಲ್ವೇಯ ಶೇಕಡ ನೂರರಷ್ಟು ವಿದ್ಯುತೀಕರಣದ ಮಹತ್ವಪೂರ್ಣ ಸಾಧನೆಗೆ ನಾವು ಸಾಕ್ಷಿಯಾಗುತ್ತಿದ್ದೇವೆ. ಈ ಎಲ್ಲಾ ಯೋಜನೆಗಳು ಕರ್ನಾಟಕದ ಯುವಜನತೆಗೆ, ಮಧ್ಯಮವರ್ಗದವರಿಗೆ, ಕಾರ್ಮಿಕರಿಗೆ, ಉದ್ಯಮಶೀಲರಿಗೆ ಸೌಲಭ್ಯ ಮತ್ತು ಹೊಸ ಅವಕಾಶಗಳನ್ನು ನೀಡಲಿದೆ” ಎಂದಿದ್ದಾರೆ.
ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ. ಬೆಂಗಳೂರಿನ ಟ್ರಾಫಿಕ್ ಜಾಮ್ ಗೆ ಮುಕ್ತಿ ನೀಡಲು, ಬೆಂಗಳೂರಿನ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಸದಾ ಬದ್ಧವಾಗಿದೆ. ನಿಮ್ಮ ಸೇವೆಗೆ ನಾವು ಸದಾ ಸಿದ್ಧರಿದ್ದೇವೆ ಎಂದು ಮೋದಿ ಹೇಳಿದ್ದಾರೆ.
ಬೆಂಗಳೂರು ಕನಸುಗಳ ನಗರ. ಅಭಿವೃದ್ಧಿಯೇ ಬೆಂಗಳೂರು ಯುವ ಜನತೆ ಕನಸಾಗಿದೆ. ಸರ್ಕಾರದ ನೆರವು ಸಿಕ್ಕರೆ ಬೆಂಗಳೂರಿನ ಯುವಕರು ಏನನ್ನು ಬೇಕಾದರೂ ಸಾಧಿಸುತ್ತಾರೆ. ಇಲ್ಲಿ ಅಂತಹ ಉದ್ಯಮಶೀಲತೆಯ ಶಕ್ತಿ ಇದೆ. ಬೆಂಗಳೂರು ನಗರ ಆತ್ಮನಿರ್ಭರ್ ಭಾರತ್ ಶಕ್ತಿಗೆ ಪ್ರೇರಣೆ ನೀಡಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.