ನವದೆಹಲಿ: ಸಶಸ್ತ್ರ ಪಡೆಗಳಿಗೆ ನೇಮಕಾತಿಗಾಗಿ ಕೇಂದ್ರವು ಹೊಸದಾಗಿ ಪ್ರಾರಂಭಿಸಿರುವ ಅಗ್ನಿಪಥ್ ಯೋಜನೆಯ ಬಗ್ಗೆ ಕೆಲವರು ವಿವಾದದ ಕಿಡಿ ಹೊತ್ತಿಸಿದ್ದಾರೆ. ಇದರಿಂದಾಗಿ ಹಲವು ರಾಜ್ಯಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಅಗ್ನಿವೀರರಿಗೆ ನಾಲ್ಕು ವರ್ಷಗಳ ಸೇವೆ ಬಳಿಕ ಉದ್ಯೋಗ ಅವಕಾಶದ ಆಫರ್ಗಳು ಸುರಿಮಳೆ ಸುರಿಯುತ್ತಿದೆ.
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು, ನಾಲ್ಕು ವರ್ಷಗಳ ಸೇವೆಯ ನಂತರ ‘ಅಗ್ನಿವೀರ್’ಗಳಿಗೆ ರಾಜ್ಯ ಸರ್ಕಾರದಲ್ಲಿ ಖಾತರಯ ಉದ್ಯೋಗಗಳನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಯೋಗ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಖಟ್ಟರ್ ಭಾಗವಹಿಸಿದ ವೇಳೆ ಈ ಘೋಷಣೆ ಮಾಡಿದ್ದಾರೆ.
“ಹರಿಯಾಣ ಸರ್ಕಾರಿ ಉದ್ಯೋಗಗಳನ್ನು ಪಡೆಯಲು ಬಯಸುವ 4 ವರ್ಷಗಳ ಸೇವೆಯ ನಂತರ ಹಿಂದಿರುಗುವ 75 ಪ್ರತಿಶತ ಅಗ್ನಿವೀರ್ಗಳಿಗೆ ಖಾತರಿಯ ಉದ್ಯೋಗಗಳನ್ನು ನೀಡಲಾಗುತ್ತದೆ. ಉದ್ಯೋಗ ಪಡೆಯಲು ಬಯಸುವವರು ಗ್ರೂಪ್ ಸಿಯ ಯಾವುದೇ ಕೇಡರ್ಗೆ ಸೇರ್ಪಡೆಗೊಳ್ಳಬಹುದು. ಉದ್ಯೋಗಗಳು ಇಲ್ಲದಿದ್ದರೆ ಪೊಲೀಸ್ನಲ್ಲಿ ಕೆಲಸ ನೀಡಲಾಗುವುದು” ಎಂದಿದ್ದಾರೆ.
ಜೂನ್ 14 ರಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಮೂರು ಸೇವಾ ಮುಖ್ಯಸ್ಥರ ಸಮ್ಮುಖದಲ್ಲಿ ಘೋಷಿಸಿದ ಅಗ್ನಿಪಥ್ ಯೋಜನೆಯು ಯುವಕರಿಗೆ ಸಶಸ್ತ್ರ ಸೇವೆಗಳಿಗೆ ಸೇರಲು ಅವಕಾಶ ಒದಗಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.