ನವದೆಹಲಿ: ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಇಂದು ತಮ್ಮ ತವರು ರಾಜ್ಯವಾದ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ರಾಯರಂಗ್ಪುರದಲ್ಲಿರುವ ಶಿವ ದೇವಾಲಯದ ಆವರಣವನ್ನು ಗುಡಿಸಿ ಸ್ವಚ್ಛ ಮಾಡಿದ್ದಾರೆ.
ಮುರ್ಮು ದೇವಸ್ಥಾನಕ್ಕೆ ಆಗಮಿಸಿ, ಪ್ರಾರ್ಥನೆ ಸಲ್ಲಿಸುವುದಕ್ಕೂ ಮೊದಲು ನೆಲವನ್ನು ಗುಡಿಸಿದ್ದಾರೆ.
ಒಡಿಶಾದ ಬುಡಕಟ್ಟು ನಾಯಕಿಯಾಗಿರುವ ಮುರ್ಮು ಅವರನ್ನು ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್ಡಿಎ ಅಭ್ಯರ್ಥಿಯಾಗಿ ಹೆಸರಿಸಲಾಗಿದೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಸಂಸದೀಯ ಮಂಡಳಿಯ ಸಭೆಯ ನಂತರ ಅಭ್ಯರ್ಥಿಯ ಹೆಸರನ್ನು ಬಹಿರಂಗಪಡಿಸಿದರು.
ಜಾರ್ಖಂಡ್ನ ಮಾಜಿ ಗವರ್ನರ್ 64 ವರ್ಷದ ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ಒಡಿಶಾದ ಮೊದಲ ವ್ಯಕ್ತಿ ಮತ್ತು ಭಾರತದ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಮಾಜಿ ಕೇಂದ್ರ ಸಚಿವ ಹಾಗೂ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಮುರ್ಮು ಕಣಕ್ಕಿಳಿಯಲಿದ್ದಾರೆ.
#WATCH | Odisha: NDA's presidential candidate Draupadi Murmu sweeps the floor at Shiv temple in Rairangpur before offering prayers here. pic.twitter.com/HMc9FsVFa7
— ANI (@ANI) June 22, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.