ಭುವನೇಶ್ವರ: ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರಿಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬೆಂಬಲ ಸೂಚಿಸಿದ್ದಾರೆ.
ದ್ರೌಪತಿ ಮುರ್ಮು ಅವರಿಗೆ ಬೆಂಬಲ ನೀಡುವಂತೆ ಒಡಿಶಾ ವಿಧಾನಸಭೆಯ ಎಲ್ಲಾ ಸದಸ್ಯರನ್ನು ಅವರು ಮನವಿ ಮಾಡಿಕೊಂಡಿದ್ದಾರೆ.
ಟ್ವೀಟ್ ಮಾಡಿರುವ ಅವರು, “ಒಡಿಶಾ ವಿಧಾನಸಭೆಯ ಎಲ್ಲಾ ಸದಸ್ಯರಿಗೂ ನಾನು ಮಾಡುತ್ತೇನೆ, ಪಕ್ಷಗಳ ಹಂಗಿಲ್ಲದೆ ದ್ರೌಪದಿ ಮುರ್ಮ ಅವರನ್ನು ದೇಶದ ಅತ್ಯುನ್ನತ ಹುದ್ದೆಗೆ ಆಯ್ಕೆಯಾಗಲು ಬೆಂಬಲಿಸಿ” ಎಂದಿದ್ದಾರೆ.
ಹಿಂದೆ ಮಾತನಾಡಿದ್ದ ದ್ರೌಪದಿ ಮುರ್ಮು ಅವರು, ನಾನು ಮಣ್ಣಿನ ಮಗಳು. ಒಡಿಶಾದ ಎಲ್ಲಾ ಶಾಸಕರು ಮತ್ತು ಸಂಸದರ ಬೆಂಬಲವನ್ನು ಪಡೆಯುವ ವಿಶ್ವಾಸ ಇದೆ ಎಂದಿದ್ದರು.
ಮುರ್ಮು ಅವರು ಒಡಿಶಾ ಮೂಲದ ಬುಡಕಟ್ಟು ಮಹಿಳೆಯಾಗಿದ್ದಾರೆ.
Appeal all the members of Odisha Legislative Assembly, cutting across party lines, to extend unanimous support to elect the daughter of #Odisha – Smt #DraupadiMurmu to the country’s highest office.
— Naveen Patnaik (@Naveen_Odisha) June 22, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.