ಮಂಗಳೂರು : ಶಾರದಾ ಮಹೋತ್ಸವದ ಅಂಗವಾಗಿ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ದ.ಕ. ಹಾಗೂ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಸೆ.14 ಹಮ್ಮಿಕೊಳ್ಳಲಾಗಿದೆ. ಸೆ.14 ಸೋಮವಾರ 9ಗಂಟೆಗೆ ಶಾರದಾ ಪದವಿ ಪೂರ್ವ ಕಾಲೇಜಿನ ಧ್ಯಾನಮಂದಿರದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರರಾವ್ ಇವರು ಉದ್ಘಾಟಿಸಲಿದ್ದು, ಶಾರದಾ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಪೊ. ಎಂ.ಬಿ. ಪುರಾಣಿಕ್ ಅಧ್ಯಕ್ಷ ಸ್ಥಾನ ವಹಿಸಲಿದ್ದಾರೆ.
ಪೂರ್ವಾಹ್ನ ಘಂಟೆ 10 ರಿಂದ ಸಂಸ್ಕೃತ ರಸಪ್ರಶ್ನೆ, ಭರತ ನಾಟ್ಯ (ವೈಯಕ್ತಿಕ), ಕರ್ನಾಟಕ ಶಾಸ್ತ್ರೀಯ ಸಂಗೀತ, ರಂಗೋಲಿ ಸ್ಪರ್ಧೆಗಳು ಜರುಗಲಿದೆ. ಮಧ್ಯಾಹ್ವ 1-30 ಕ್ಕೆ ಏಕವ್ಯಕ್ತಿ ಯಕ್ಷಗಾನ ಸ್ಪರ್ಧೆ, 2.00 ಗಂಟೆಗೆ ಭಜನಾಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಗಳು ಜರುಗಲಿವೆ.
ವಿದ್ಯಾರ್ಥಿಗಳು ವಿದ್ಯಾಸಂಸ್ಥೆಯ ದೃಢೀಕರಣ ಪತ್ರವನ್ನು ಸೆ.10ರೊಳಗೆ ತಲುಪಿಸಬಹುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ದೂರವಾಣಿ ಸಂಖ್ಯೆ :0824 – 2495464 , ಹಾಗೂ 9449332653 – ರಮೇಶ ಆಚಾರ್ಯ, ಸಂಯೋಜಕರು, ಶಾರದಾ ಮಹೋತ್ಸವ ಸ್ಪರ್ಧಾ ವಿಭಾಗ, ಶಾರದಾ ಪದವಿ ಪೂರ್ವ ಕಾಲೇಜು, ಮಂಗಳೂರು ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಪೊ. ಎಂ.ಬಿ. ಪುರಾಣಿಕ್ ಹಾಗೂ ಶಾರದಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಡಾ| ಡಿ. ಶ್ರೀಪತಿ ರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.