ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2002 ರ ಗುಜರಾತ್ ಗಲಭೆ ಕುರಿತ ಸುಪ್ರೀಂಕೋರ್ಟ್ ತೀರ್ಪನ್ನು ಶ್ಲಾಘಿಸಿದ್ದಾರೆ ಮತ್ತು ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ವಿರುದ್ಧ “ರಾಜಕೀಯ ಪ್ರೇರಿತ” ಆರೋಪಗಳನ್ನು ಮಾಡಿದವರು ಈಗ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.
ಎಎನ್ಐಗೆ ಸಂದರ್ಶನ ನೀಡಿರುವ ಅವರು, ಸಂವಿಧಾನವನ್ನು ಹೇಗೆ ಗೌರವಿಸಬೇಕು ಎಂಬುದಕ್ಕೆ ಮೋದಿ ಎಲ್ಲಾ ರಾಜಕೀಯ ವ್ಯಕ್ತಿಗಳಿಗೆ ಆದರ್ಶ ಉದಾಹರಣೆಯನ್ನು ಪ್ರಸ್ತುತಪಡಿಸಿದ್ದಾರೆ ಎಂದಿದ್ದಾರೆ
“ಪ್ರಜಾಪ್ರಭುತ್ವದಲ್ಲಿ ಸಂವಿಧಾನವನ್ನು ಹೇಗೆ ಗೌರವಿಸಬೇಕು ಎಂಬುದಕ್ಕೆ ಪ್ರಧಾನಿ ಮೋದಿ ಅವರು ಎಲ್ಲಾ ರಾಜಕೀಯ ವ್ಯಕ್ತಿಗಳಿಗೆ ಆದರ್ಶ ಉದಾಹರಣೆ ನೀಡಿದ್ದಾರೆ. ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಮೋದಿಜಯವರನ್ನೂ ವಿಚಾರಣೆಗೆ ಒಳಪಡಿಸಲಾಯಿತು, ಆದರೆ ಯಾರೂ ಪ್ರತಿಭಟಿಸಲಿಲ್ಲ, ದೇಶಾದ್ಯಂತದ ಕಾರ್ಯಕರ್ತರು ಮೋದಿಗಾಗಿ
ಜಮಾಯಿಸಲಿಲ್ಲ. ನಾವು ಕಾನೂನಿಗೆ ಸಹಕರಿಸಿದ್ದೇವೆ. ನನ್ನನ್ನೂ ಬಂಧಿಸಲಾಯಿತು.ನಾವು ಪ್ರತಿಭಟಿಸಲಿಲ್ಲ.ಇಂತಹ ಸುದೀರ್ಘ ಹೋರಾಟದ ಗೆಲುವಿನ ನಂತರ ಸತ್ಯ ಹೊರಬಂದಾಗ ಅದು ಚಿನ್ನಕ್ಕಿಂತ ಪ್ರಕಾಶಮಾನವಾಗಿ ಹೊಳೆಯುತ್ತದೆ.ಮೋದಿ
ಯವರ ವಿರುದ್ಧ ಆರೋಪ ಮಾಡಿದವರು ಇಂದು ಕ್ಷಮೆಯಾಚಿಸಬೇಕು” ಎಂದು ಶಾ ಹೇಳಿದ್ದಾರೆ.
2002 ರ ಗುಜರಾತ್ ಗಲಭೆಯಲ್ಲಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರ ಹಲವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ನೀಡಿದ್ದ ಕ್ಲೀನ್ ಚಿಟ್ ಅನ್ನು ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
HM Shri @AmitShah's interview to ANI. https://t.co/ZHWAYpkuij
— BJP (@BJP4India) June 25, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.